spot_img
spot_img

ಕವನ: ಮೇರು ಕನಕ

Must Read

spot_img

ಮೇರು_ಕನಕ

- Advertisement -

ವ್ಯಾಸರು ಮೆಚ್ಚಿದ
ದಾಸರ ಪಂಕ್ತಿಯ
ಮೋಸವನರಿಯದ ಮುಗ್ಧರಿಗೆ
ತೋಷದಿ ಪರೀಕ್ಷೆ
ದಾಸರುವಿಟ್ಟರು
ಬೇಸರ ತೋರಿದ ಶಿಷ್ಯರಿಗೆ||

ಬಾಳೆಯ ಫಲವನು
ಕಾಳಗೆ ಕಾಣದೆ
ಕಾಳಜಿಯಿಂದಲಿ ಸವಿರೆಲ್ಲ
ಕಾಳನುವಿಲ್ಲದ್
ಸ್ಥಳವದುವಿಲ್ಲವು
ಹೇಳಿದ ಸುಂದರ ಜಗಮಲ್ಲ||

ಬಚ್ಚಮ ತನಯನು
ಕೆಚ್ಚೆದೆ ಶೂರನು
ಹೆಚ್ಚಿತು ಕೀರ್ತಿಯು ಮನೆತನದು
ರೊಚ್ಚಿಗೆ ಬರುವನು
ಚುಚ್ಚುತ ವೈರಿಯ
ಕೊಚ್ಚುತ ಚಣದಲಿ ಮಧಿಸುವನು||

- Advertisement -

ತಿಮ್ಮಪ್ಪ ವರನಿವ
ತಿಮ್ಮಪ್ಪ ನಾಯಕ
ಬಿಮ್ಮಿನ ಬೀರಪ್ಪ ಸುಪುತ್ರನು
ಸುಮ್ಮನೆ ಕೆಣಕುವ
ಹಮ್ಮಿನ ಹಗೆಗಿವ
ಗುಮ್ಮನ ತರದಲಿ ಕಾಡುವನು ||

ರಾಮನ ಧಾನ್ಯದ
ನೇಮವ ಪೊಗಳಿದ
ಧಮಯಂತಿ ನಳರ ಕೃತಿರಚಿಸಿ
ರಾಮನ ಭಕ್ತನು
ತಾಮಸ ಗುಣದವ
ನಾಮದಿ ಕನಕವ ನೀ ಗಳಿಸಿ||

ಶ್ರೀ ಈರಪ್ಪ ಬಿಜಲಿ

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group