ಕವನ

Must Read

ವಚನಗಳ ತಿಳಿವು

ಶರಣರ ಸ್ವಾನುಭಾವದ
ಘನವು ಬೆರೆತು ಅರಳಿದ
ಮಿತವಾದ ಭಾಷೆ
ರಾಗತಾಳವಿಲ್ಲ ನಮ್ಮ
ಶರಣರ ವಚನಕೆ
ಅದೊಂದು ನಾದಾತೀತ ಯೋಗ

ಅದೊಂದು ಹಾಲತೊರೆ
ಭಾವಾನುಭಾವಗಳ ತೆರೆ
ಅದರಲ್ಲಿಹುದು ಬೆಲ್ಲದ
ಸಿಹಿಯ ಹೊನಲು
ಮಧುರ ಮಧುರ ಜ್ಞಾನದ
ಘಮಲು

ಶರಣರ ಅಂತಶ್ಚೇತನದ
ಅಚ್ಚಳಿಯದ ನುಡಿಗಳೇ
ವಚನದ ಕಿಡಿಗಳು
ಅದನು ಅರಿತವನೇ
ನಿಜವಾದ ಶರಣ
ಅಕ್ಷರ ಮಾಂತ್ರಿಕದ
ಮಹಾಶರಣ

ಅದರೊಳಗಿರುವ ಸ್ವರವೆಲ್ಲ
ಪರತತ್ವದ ಪರಾಕಾಷ್ಠೆ
ಭಕ್ತಿರಸ ಹೊರಹೊಮ್ಮುವ
ಪ್ರಸಾದಭರಿತ ಹೊನ್ನ ನುಡಿಗಳು
ವಚನಗಳ ತಿಳಿವಳಿಕೆಯೇ
ನಮ್ಮ ಬಾಳಿನ ಹೆಗ್ಗುರಿ

ಸುಧಾ ಪಾಟೀಲ
ಬೆಳಗಾವಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group