spot_img
spot_img

ಕಸಾಪ ಚುನಾವಣೆ ಮುಂದೂಡಿಕೆ

Must Read

spot_img
- Advertisement -

ಬರುವ ಮೇ. ೯ ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿರುವ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ. ವೆಂಕಟಸ್ವಾಮಿ ಅವರು, ರಾಜ್ಯದಲ್ಲಿ ಕೊರೋನಾ ವೈರಾಣು ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಸದ್ಯಕ್ಕೆ ೧೪೪ ನೇ ಕಲಂ ಜಾರಿಯಲ್ಲಿ ಇರುವುದರಿಂದ ಹಾಗೂ ಕಸಾಪ ಅಭ್ಯರ್ಥಿಗಳು ಮತ್ತು ಮತದಾರರಿಂದ ಮನವಿಗಳು ಬಂದಿರುವುದರಿಂದ ಚುನಾವಣೆಯನ್ನು ಮುಂದೂಡಲಾಗಿದೆ ಎಂದಿದ್ದಾರೆ.

- Advertisement -

ಮೇ.೯ ರ ಕಸಾಪ ಚುನಾವಣೆಗೆ ಹಲವು ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು ಆದರೆ ಕೊರೋನಾ ವ್ಯಾಪಕವಾಗಿ ಹರಡಿ ಸಾವುನೋವುಗಳು ಸಂಭವಿಸುತ್ತಿರುವುದರಿಂದ ಈಗ ಇರುವ ಸಿದ್ಧತೆಗಳನ್ನು ಅಲ್ಲಿಗೇ ನಿಲ್ಲಿಸಿ ಮುಂದಿನ ಪ್ರಕಟಣೆಯವರೆಗೂ ಚುನಾವಣೆ ಮುಂದೂಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group