ಚುಟುಕುಗಳು

Must Read

ಸ್ಮರಣೆ

ಬಾವುಟ ಹಾರಿಸಿದ
ಮಂತ್ರಿಗಳು ಮಾಡಿದರು
‘ಗಾಂಧಿ ಸ್ಮರಣೆ ‘
ಎದುರು ರಸ್ತೆಯ ಬಾರೊಂದರಲಿ
ನಡೆದಿತ್ತು…
ಭರ್ಜರಿ ಸೇಂದಿ ಸ್ಮರಣೆ…

ಹುಚ್ಚ

ಬಟ್ಟೆ ಗಂಟುಗಳ
ಹಿಮಾಲಯ ಪರ್ವತ
ಮೆದುಳ ತುಂಬಾ
ಥಕ ದಿಂ-ಥಕ ದಿಂ
ಭಾವಗಳ ಭರತನಾಟ್ಯ,
ಶೃತಿಯಿಲ್ಲದ ಗಾನ
ಹಾಡುವ ಆತ ದಿನವೂ
ರಸ್ತೆಯ ಅಂಚಿನಲ್ಲಿ
ಹುಡುಕುತ್ತಿದ್ದಾನೆ
ಬೆಂಕಿ ಅಪಘಾತದಲ್ಲಿ
ಭಸ್ಮವಾದ…
ತನ್ನ ಹೆಂಡತಿ-ಮಕ್ಕಳನ್ನು!!!
ರಾತ್ರಿ-ಹಗಲೆನ್ನದೆ
ಮಳೆ-ಚಳಿ-ಗಾಳಿಗಳ ಮಧ್ಯೆ…

ಅಚ್ಚರಿ..ಅಚ್ಚರಿ

ಯುವಶಕ್ತಿ ಸಿಡಿದೇಳಬೇಕು
ಎಂಬ ಕರೆ ಕೇಳಿ
ನಮ್ಮೂರ ಯುವಕರು ಸಿಡಿದೆದ್ದು,
ಬಾರಿಗೆ ನುಗ್ಗಿ ‘ಗುಂಡು’ಹಾಕಿ
ಊರೊಳಗೆ ನುಗ್ಗಿ
ರಾತ್ರೋರಾತ್ರಿ
ಹಲವರ ತೆಂಗು-,ಮಾವು
ತೋಟಗಳಿಗೆ ನುಗ್ಗಿ,
ಮರಗಳಿಗೆ ಲಗ್ಗೆ ಹಾಕಿ
ರಸದೌತಣ ಮಾಡಿದರು…

ಡಾ.ಭೇರ್ಯ ರಾಮಕುಮಾರ್,
ಸಾಹಿತಿಗಳು, ಪತ್ರಕರ್ತರು
ಮೊ:94496 80583
63631 72368

Latest News

ಪೂ ಚಂ ತೇ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ : ಡಿ. ಕೆ.ಶಿವಕುಮಾರ

ಬೆಂಗಳೂರು ನಗರದ ಲಾಲ್ ಬಾಗ್ ನಲ್ಲಿ ಜನವರಿ 15 ರಿಂದ 26ರ ವರೆಗೆ ಏರ್ಪಡಿಸಲಾಗಿರುವ ಫಲ ಪುಷ್ಪ ಪ್ರದರ್ಶನವನ್ನು ಡಿ. ಕೆ. ಶಿವಕುಮಾರ್ ಅವರು ಬುಧವಾರ...

More Articles Like This

error: Content is protected !!
Join WhatsApp Group