spot_img
spot_img

ಸರ್ಕಾರದ ಅವೈಜ್ಞಾನಿಕ ಕ್ರಮ – ಖಂಡನೆ

Must Read

- Advertisement -

ಸಿಂದಗಿ: ಕರೊನಾ ಮಾಹಾಮಾರಿ ರೋಗವನ್ನು ತಡೆಯುವಲ್ಲಿ ವಿಫಲವಾದ ರಾಜ್ಯ ಸರ್ಕಾರ ಮತ್ತೊಂದು ಅವೈಜ್ಞಾನಿಕ ನಿಲುವು ಕೈಗೆತ್ತಿಕೊಂಡು ಮಕ್ಕಳನ್ನು ಸಂಕಷ್ಟಕ್ಕೆ ಸಿಲುಕಿಸುವ ಹುನ್ನಾರ ನಡೆಸಿದೆ.

ವಿದ್ಯಾರ್ಥಿಗಳ ಜೀವದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದೆ ಬಂಡವಾಳಶಾಹಿಗಳ ಪರ ಸರಕಾರ ನಿಂತಿರುವದು ಸ್ಪಷ್ಟವಾಗಿ ಗೋಚರಿಸುತ್ತಿದೆ, ಶಿಕ್ಷಣ ಸಚಿವರ ಅವೈಜ್ಞಾನಿಕ ನಿಲುವನ್ನು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ದಸ್ತಿಗೀರ ಮುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಬರೆಯಬೇಕು ಪದವಿ ಪೂರ್ವ ಕಾಲೇಜಿನ (ಪಿಯುಸಿ)ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ ಮಾಡುವದರ ಹಿಂದೆ ದೊಡ್ಡ ಮಾಫಿಯಾ ಅಡಗಿದೆ ಅಲ್ಲದೆ ಬಂಡವಾಳ ಶಾಹಿಗಳ ಕಪಿ ಮುಷ್ಟಿಯಲ್ಲಿ ಸರ್ಕಾರ ಬಂಧಿತವಾಗಿದೆ ಎಂದು ಅನಿಸುತ್ತಿದೆ ಮೆಡಿಕಲ್ ಮತ್ತು ಇಂಜನೀಯರಿಂಗ್ ಸೀಟ್ ಗಳನ್ನು ಹೋಲಸೇಲದಲ್ಲಿ ಮಾರಾಟ ಮಾಡುವ ಹುನ್ನಾರ ನಡೆಯಬಹುದು ಈ ನಿಲುವು ಅವೈಜ್ಞಾನಿಕ ನಿಲುವು ಆಗಿದ್ದು ಈ ನಿರ್ಧಾರವನ್ನು ಸರ್ಕಾರ ಕೈ ಬಿಡಬೇಕು.

- Advertisement -

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ ಪರೀಕ್ಷೆ ನಡೆಸಲು ಮುಂದಾದ ಸರ್ಕಾರ ಮಕ್ಕಳ ಆರೋಗ್ಯದ ಬಗ್ಗೆ ಮೊದಲು ಮುಂಜಾಗೃತಾ ಕ್ರಮ ಏನು ಕೈಗೊಳ್ಳಲಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಿ ಈ ನಿರ್ಧಾರ ಕೈಗೊಳ್ಳಬೇಕಿತ್ತು ಕರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಗೊತ್ತಿದ್ದರೂ ಕೂಡಾ ಇಂತಹ ನಿರ್ಧಾರ ಕೈಗೊಳ್ಳುವದು ಸೂಕ್ತವಲ್ಲಾ. ಈ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಎಸ್ಪಿ ಪಕ್ಷ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group