spot_img
spot_img

ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ

Must Read

- Advertisement -

ಬೆಂಗಳೂರು– ನಗರದ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇದೇ ಭಾನುವಾರ ಡಿ. 27ರಂದು ಮಧ್ಯಾಹ್ನ 3.30 ಗಂಟೆಯಿಂದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಕೊಳದ ಮಠದ ಡಾ. ಶಾಂತಿವೀರ ಮಹಾಸ್ವಾಮೀಜಿ ರವರು ದಿವ್ಯ ಸಾನ್ನಿಧ್ಯ ವಹಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಜರಗನಹಳ್ಳಿ ಸದಾಶಿವಯ್ಯ ವಹಿಸಲಿದ್ದಾರೆ. ಕನ್ನಡ ಪರ ಹೋರಾಟಗಾರ ಗೋವಿಂದೇಹಳ್ಳಿ ಕೃಷ್ಣೇಗೌಡ, ಸಮಾಜ ಸೇವಕ ಡಾ. ಎಸ್. ಆರ್. ರೇಣುಕಾಪ್ರಸಾದ್, ಸಂಗೀತ ನಿದೇರ್ಶಕ ಬಿ. ಬಲರಾಮ್, ಕಲಾ ಪೋಷಕ ಡಾ. ಜಯಶಂಕರ್ ರೆಡ್ಡಿ ಎನ್.ವಿ. ಹಾಗೂ ಡಾ. ರಾಜೇಶ್ವರಿ ಎನ್ ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

- Advertisement -

ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ರಾಜ್ಯ ಉಪಾಧ್ಯಕ್ಷ ಡಾ. ವಿ. ಶ್ರೀಕಂಠಸ್ವಾಮಿ ದೀಕ್ಷಿತ್‍ರವರಿಗೆ `ವಿಶ್ವ ಮಾನವ ರತ್ನ ಪ್ರಶಸ್ತಿ’, ಖ್ಯಾತ ಸಂಶೋಧಕ ಹಾಗೂ ಕಾದಂಬರಿಕಾರ ಡಾ. ಕೆ. ರಮಾನಂದರವರಿಗೆ `ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಸಿರಿ’ ಪ್ರಶಸ್ತಿ ಮತ್ತು ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ `ರಾಷ್ಟ್ರೀಯ ಯುವ ರತ್ನ’ ಪ್ರಶಸ್ತಿಯನ್ನು ಹಾಗೂ ಇನ್ನಿತರ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರಾದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ. ಗುಣವಂತ ಮಂಜು ರವರು ತಿಳಿಸಿರುತ್ತಾರೆ.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group