spot_img
spot_img

ಇಂದು ಕನ್ನಡದ ಕಥೆಗಾರರಾದ ಶ್ರೀ ರಾಘವೇಂದ್ರ ಖಾಸನೀಸ ಅವರು ಜನಿಸಿದ ದಿನ

Must Read

- Advertisement -

ಜನನ

೦೨.೦೩.೧೯೩೩ರಲ್ಲಿ ವಿಜಯಪುರದ ಜಿಲ್ಲೆಯ ಇಂಡಿಯಲ್ಲಿ ಜನನ. ತಂದೆ ನಾರಾಯಣ ಖಾಸನೀಸ, ತಾಯಿ ಕಮಲಾಬಾಯಿ.

ಶಿಕ್ಷಣ

  • ವಿಜಯಪುರದಲ್ಲಿ ಶಾಲಾಶಿಕ್ಷಣ
  • ಧಾರವಾಡದಲ್ಲಿ ಕಾಲೇಜುಶಿಕ್ಷಣ. ಬಿ.ಎ.ಪದವಿ (೧೯೫೪)
  • ಮುಂಬಯಿಯ ಎಲ್ ಫಿನ್ಸ್ ಟನ್ ಕಾಲೇಜಿನಲ್ಲಿ ಇಂಗ್ಲೀಷ್ ಎಂ.ಎ. ಪದವಿ
  • ಮುಂಬಯಿ ವಿವಿ ಗ್ರಂಥಾಲಯ ವಿಜ್ಞಾನದಲ್ಲಿ ಡಿಪ್ಲೊಮಾ.

ವೃತ್ತಿಜೀವನ

ಪುಣೆಯ ಎಸ್.ಪಿ.ಕಾಲೇಜಿನ ಗ್ರಂಥಾಲಯದಲ್ಲಿ ವೃತ್ತಿ.
ವಲ್ಲಭ ವಿದ್ಯಾನಗರದ ಬಿರ್ಲಾ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯದಲ್ಲಿ ವೃತ್ತಿ.

ಬೆಂಗಳೂರು ವಿವಿ ಸಹಾಯಕ ಗ್ರಂಥಪಾಲಕರಾಗಿ ೧೯೯೧ರಲ್ಲಿ ನಿವೃತ್ತಿ.
ಓವರ್‌ಸೀಯರ್ ಆಗಿದ್ದ ತಂದೆಯು ಆರ್ಥರ್ ಕಾನನ್‌ಡೈಲ್, ಶರ್ಲಾಕ್‌ಹೋಮ್ಸ್‌ನ ಪತ್ತೇದಾರಿ ಕಾದಂಬರಿಗಳು ಮತ್ತು ದೆವ್ವದ ಕಥೆಗಳನ್ನು ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಮಗನಿಗೆ ಹೇಳುತ್ತಿದ್ದುದರಿಂದಲೇ ಒಳಗೊಬ್ಬ ಕಥೆಗಾರ ಇವರಲ್ಲಿ ರೂಪಗೊಳ್ಳತೊಡಗಿದ. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಯವರೆಗೆ ಓದಿದ್ದು ವಿಜಾಪುರದಲ್ಲಿ, ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿದ್ದಾಗಲೇ ತಿ.ತಾ.ಶರ್ಮರ ವಿಶ್ವಕರ್ನಾಟಕ ಪತ್ರಿಕೆಗೆ ಕಥೆ ಬರೆದುಕಳುಹಿಸಿದಾಗ ಮಕ್ಕಳ ಕಥಾ ವಿಭಾಗದಲ್ಲಿ ಆ ಕಥೆ ಪ್ರಕಟಗೊಂಡಾಗ ಇವರಿಗಾದ ಆನಂದ ಹೇಳತೀರದ್ದು, ಕಥೆಯನ್ನು ಓದಿದ ಶಾಲೆಯ ಉಪಾಧ್ಯಾಯರುಗಳೂ ಬೆನ್ನು ತಟ್ಟಿದರು. ಕಾಲೇಜಿಗೆ ಸೇರಿದ್ದು ಧಾರವಾಡದಲ್ಲಿ ಪ್ರೊ. ವಿ.ಎಂ. ಇನಾಂದಾರ್‌, ಎಸ್.ಆರ್‌.ಮಳಗಿ, ಸ.ಸ.ಮಾಳವಾಡ ಮುಂತಾದವರುಗಳಲ್ಲಿ ಶಿಷ್ಯತ್ವ. ಇನಾಂದಾರರ ‘ಸ್ವರ್ಗದಬಾಗಿಲು’, ಗೋಕಾಕರ ‘ಸಮರಸವೇ ಜೀವನ’ ಕಾದಂಬರಿಗಳಿಗೆ ಇವರು ವಿಮರ್ಶೆ ಬರೆದಿದ್ದರು. ಜೊತೆಗೆ ಹಲವಾರು ಕಥೆಗಳು ಓಲೇಟಿ ವಿ.ಗುಪ್ತ ಮತ್ತು ಡಿ.ಎಸ್.ರಾಮರಾವ್‌ರವರ ಕಥಾವಳಿ ಪತ್ರಿಕೆ ಮತ್ತು ಬೆಟಗೇರಿ ಕೃಷ್ಣಶರ್ಮರ ಜಯಂತಿ ಪತ್ರಿಕೆಗಳಲ್ಲಿ ಪ್ರಕಟವಾಗದವು. ಬಿ.ಎ. ಪವಿಯ ನಂತರ (೧೯೫೪) ಮುಂಬಯಿಯ ಎನ್‌ಫಿನ್ಸ್‌ಟನ್ ಕಾಲೇಜಿನಿಂದ ಪಡೆದ ಎಂ.ಎ. (ಇಂಗ್ಲೀಷ್) ಪದವಿ ಜೊತೆಗೆ ಮುಂಬಯಿ ವಿಶ್ವವಿದ್ಯಾಲಯದಿಂದ ಗಳಿಸಿದ್ದು ಗ್ರಂಥಾಲಯ ವಿಜ್ಞಾನದಲ್ಲಿ ಡಿಪ್ಲೊಮ. ಉದ್ಯೋಗಕ್ಕಾಗಿ ಸೇರಿದ್ದು ಪುಣೆಯ ಎಸ್.ಪಿ. ಕಾಲೇಜಿನಲ್ಲಿ ಗ್ರಂಥಾಲಯದಲ್ಲಿ. ನಂತರ ವಲ್ಲಭ ವಿದ್ಯಾನಗರದ ಬಿರ್ಲಾ ಎಂಜನಿಯರಿಂಗ್ ಕಾಲೇಜಿನ ಗ್ರಂಥಾಲಯದಲ್ಲಿ ಕೆಲಕಾಲ ಕಾರ್ಯ ನಿರ್ವಹಿಸಿ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಹಾಯಕ ಗ್ರಂಥಪಾಲಕರಾಗಿ ನೇಮಕಗೊಂಡು ೧೯೯೧ರಲ್ಲಿ ನಿವೃತ್ತರಾದರು.

- Advertisement -

ಪುಣೆಯ ಎಸ್.ಪಿ.ಕಾಲೇಜಿನಲ್ಲಿ ಗ್ರಂಥಾಲಯದಲ್ಲಿದ್ದಾಗಲೇ ಮರಾಠಿ ಭಾಷೆ ಹಾಗೂ ಸಾಹಿತ್ಯವನ್ನು ಓದಿ, ಅನೇಕ ಬಂಗಾಳಿಕಥೆಗಳನ್ನು ಮರಾಠಿಯಿಂದ ಕನ್ನಡಕ್ಕೆ ತಂದರು. ಖಾಸನೀಸರ ಮೊದಲ ಕಥಾಸಂಕಲ ‘ಖಾಸನೀಸರ ಕಥೆಗಳು’ ೧೯೮೪ರಲ್ಲಿ ಪ್ರಕಟವಾಯಿತು. ಕೇವಲ ಐದು ಕಥೆಗಳಿದ್ದು ಆ ಸಂಕಲನ ಕಥಾಸಕ್ತರ ಗಮನ ಸೆಳೆಯಿತು. ಅದೇ ವರ್ಷವೇ ಕರ್ನಾಟಕ ಸಾಹಿತ್ಯ ಅಕಾಡಮಿಯು ‘ಖಾಸನೀಸರ ಕಥೆಗಳು’ ಅತ್ಯುತ್ತಮ ಸೃಜನ ಶೀಲ ಕೃತಿ ಎಂದು ಪ್ರಶಸ್ತಿ ನೀಡಿ ಪುರಸ್ಕರಿಸಿತು. ಎರಡನೆಯ ಕಥಾ ಸಂಕಲನ ‘ಬೇಡಿಕೊಂಡವರು’ ೧೯೮೯ರಲ್ಲ ಪ್ರಕಟವಾಯಿತು.

೧೯೯೫ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡಮಿಯು ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಿತು. ಪ್ರಿಸಮ್‌ಬುಕ್ಸ್ ಪ್ರೈ.ಲಿ. ಬೆಂಗಳೂರು ಇವರು ೨೦೦೬ರಲ್ಲಿ ‘ಖಾಸನೀಸರ ಸಮಗ್ರಕಥೆಗಳು’ ಎಂದು ಪ್ರಕಟವಾಗಿರುವುದರಲ್ಲಿ ಕೇವಲ ಒಂಬತ್ತೇ ಕಥೆಗಳಿವೆ.

೨೦೧೧ರಲ್ಲಿ ಧಾರವಾಡದ ಮನೋಹರ ಗ್ರಂಥಮಾಲೆಯು ಖಾಸನೀಸರ ಎಲ್ಲ ಕಥೆಗಳನ್ನು ಸೇರಿಸಿ ‘ಸಮಗ್ರ ಕಥೆಗಳನ್ನು’ ಪ್ರಕಟಿಸಿದೆ. ಖಾಸನೀಸರ ಅನೇಕ ಕಥೆಗಳು ಇತರ ಭಾಷೆಗಳಿಗೂ ಅನುವಾದಗೊಂಡಿದೆ. ಅವುಗಳಲ್ಲಿ ‘ತಬ್ಬಲಿಗಳು’ ಎಂಬ ಕಥೆಯು ORPHANS ಎಂಬ ಹೆಸರಿನಿಂದ ಡಾ. ವಿಕ್ರಮರಾಜ ಅರಸ್ ರವರು ಸಂಪಾದಿಸಿರುವ ‘AN ANTHOLOGY OF KANNADA SHORT STORIES’ ಸಂಕಲನದಲ್ಲಿ ಸೇರಿದೆ……. ಈ ಕಥೆಯು ಎಸ್.ದಿವಾಕರ್‌ ರವರು ಸಂಪಾದಿಸಿರುವ ಶತಮಾನದ ಸಣ್ಣಕಥೆಗಳು ಸಂಗ್ರಹದಲ್ಲಿಯೂ ಸೇರಿದೆ. ‘ಹೀಗೂ ಇರಬಹುದು!’ ಎಂಬ ಕಥೆಯು ದೂರದರ್ಶನದ ಕಥೆಗಾರ ಮಾಲಿಕೆಯಲ್ಲಿ ಪ್ರಸಾರಗೊಂಡಿದೆ.

- Advertisement -

ಇದಲ್ಲದೆ ಗ್ರಂಥಾಲಯಕ್ಕೆ ಸಂಬಂಧಿಸಿದ ಅನೇಕ ಬಿಡಿ ಬರಹಗಳೂ ಪ್ರಕಟವಾಗಿವೆ. “ಈ ಪ್ರಪಂಚದಲ್ಲಿ ನಡೆಯುವ ಘಟನಾವಳಿಗಳೆಲ್ಲವೂ ಪೂರ್ವ ನಿಯೋಜಿತವಾದದ್ದು, ಮನುಷ್ಯನ ಇಷ್ಟಾನಿಷ್ಟಗಳಿಗೆ ಇಲ್ಲಿ ಬೆಲೆಯೂ ಇಲ್ಲ. ನಡೆಯುದ ಘಟನೆಗಳಿಗೆ ಮೂಕ ಪ್ರೇಕ್ಷಕನಾಗಿ ಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೇ ವಿನಃ ಅನ್ಯಮಾರ್ಗವಿಲ್ಲ” ಎಂಬುದು ಹಲವಾರು ಕಥೆಗಳಲ್ಲಿ ಕಾಣಬರುವ ಅಂಶ. ಹೀಗೆ ಅತ್ಯಂತ ಯಶಸ್ವಿ ಕಥೆಗಳನ್ನು ಕನ್ನಡದ ಕಥಾಲೋಕಕ್ಕೆ ನೀಡಿದ್ದಾರೆ.

ಕೃತಿಗಳು

  • ಖಾಸನೀಸರ ಕತೆಗಳು (ಪ್ರ:ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು), ೧೯೮೪
  • ಬೇಡಿಕೊಂಡವರು – ನೀಳ್ಗತೆಗಳು (ಪ್ರ: ಮನೋಹರ ಗ್ರಂಥಮಾಲೆ, ಧಾರವಾಡ), ೧೯೮೯
  • ಖಾಸನೀಸರ ಸಮಗ್ರಕಥೆಗಳು (ಪ್ರಿಸಮ್‌ಬುಕ್ಸ್ ಪ್ರೈ.ಲಿ. ಬೆಂಗಳೂರು), ೨೦೦೬

ಪ್ರಶಸ್ತಿ, ಗೌರವಗಳು

  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ: ಅತ್ಯುತ್ತಮ ಸೃಜನಶೀಲ ಕೃತಿ-
  • ಖಾಸನೀಸರ ಕತೆಗಳು (೧೯೮೪)
  • ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (೧೯೯೫)
  • ’ಹೀಗೂ ಇರಬಹುದು’ ಕತೆ ದೂರದರ್ಶನದ ‘ಕತೆಗಾರ’ ಮಾಲಿಕೆಯಲ್ಲಿ ಪ್ರಸಾರ.

ನಿಧನ

ಪಾರ್ಕಿನ್‌ಸನ್ ವ್ಯಾಧಿಯಿಂದ ಬಳಲುತ್ತಿದ್ದ ರಾಘವೇಂದ್ರ ಖಾಸನೀಸರು ೧೯.೦೩.೨೦೦೭ರಂದು ೭೪ನೇ ವಯಸ್ಸಿನಲ್ಲಿ ನಿಧನರಾದರು.

ಮಾಹಿತಿ ಕೃಪೆ: ಅಂತರ್ಜಾಲ
ಸಂಗ್ರಹ:‌ ಶ್ರೀ ಇಂಗಳಗಿ ದಾವಲಮಲೀಕ

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group