ಕವನ : ಇದ್ದು ಬಿಡು

Must Read

ಇದ್ದು ಬಿಡು

ನೀನು ಸಾಕು
ನೀನೊಬ್ಬಳೇ ಸಾಕು
ಎತ್ತರದ ಯಶ
ವಿಂಧ್ಯ ಪರ್ವತ ಏರಲು

ನೀನಿದ್ದರೆ ಪಕ್ಕ
ಸ್ವರ್ಗ ಸುಖ
ನೀನಿರದ ವಿರಹ
ನರಕ ಯಾತನೆ

ನಿನ್ನ ಜೊತೆಗೆ ಪಯಣ
ಹೂವು ಹಸಿರು ಕಾನನ
ನೀನಿರದ ಹೆಜ್ಜೆ
ಬರಡು ಮರ ಭೂಮಿ

ನಿನ್ನ ಸ್ನೇಹ ಪ್ರೀತಿ
ಒಲವು ಬಾಳ ರೀತಿ
ನಿನ್ನ ನೆನಪಿನ ಕ್ಷಣ
ನನ್ನ ಜೀವದ ಸ್ಪೂರ್ತಿ

ಇದ್ದು ಬಿಡು ಹೀಗೆ
ನನ್ನಲ್ಲಿ ನನ್ನೊಳಗೆ
ಸದ್ದಿಲ್ಲದೆ ಮೌನದಲಿ
ಕವನ ಕಾವ್ಯ ಭಾವವಾಗಿ

______________________
ಡಾ.ಶಶಿಕಾಂತ ಪಟ್ಟಣ ರಾಮದುರ್ಗ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group