ಕವನ

Must Read

ಉಳಿದು ಬಿಟ್ಟವು
——————————-
ಗೆಳತಿ
ಉಳಿದು ಬಿಟ್ಟವು
ನನ್ನ ಮಾತುಗಳು
ನಿನ್ನ ಮೌನದ
ತಿಜೋರಿಯಲ್ಲಿ .

ಹಾಗೆ ಉಳಿದು ಬಿಟ್ಟವು
ಊರ ಹೊರಗಿನ
ಬಂಡೆಗಳ ಮೇಲಿನ
ನಮ್ಮ ಹೆಸರುಗಳು.

ಅನಾಥವಾದವು
ಮರದ ಕೆತ್ತನೆ
ಮೂಕವಾಯಿತು
ಕಟ್ಟಿದ ಗುಬ್ಬಿ ಗೂಡು.

ಕೊಚ್ಚಿ ಹೋಯಿತು
ಮರುಳ ಮೇಲಿನ ಕಾವ್ಯ
ಕಗ್ಗತ್ತಲಿನಲಿ
ಕನಲಿದವು ಭಾವಗಳು.

ಬಾಡಿದವು ಭರವಸೆಗಳು
ಕಮರಿದವು ಕನಸುಗಳು
ಸೋತ ಆಶಯಗಳು
ಉಳಿದವು ಭಾವ ಕವನಗಳಲ್ಲಿ
————————————–
ಡಾ ಶಶಿಕಾಂತ ಪಟ್ಟಣ ಪುಣೆ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group