ಕವನ: ರಾಧಾ ಕೃಷ್ಣರ ದಿವ್ಯ ಪ್ರೇಮ

Must Read

ಸ್ನೇಹ ಎಂದೇ ನೀ

ಸ್ನೇಹ ದಾಟಿ ಪ್ರೇಮವೆಂದೇ ನಾ
ಪ್ರೀತಿಯ ಹೆಜ್ಜೆಗೆ ಸ್ನೇಹವೇ ಮೂಲಾಧಾರ
ನನ್ನ ಭಾವ ತರಂಗದ ಮಾತೆಂದು
ಮೌನಿಯಾದೆ ನಾ……

ಯಾರದೋ ಶಾಪಕ್ಕೆ ಮರೆತು
ಹೊರಟೆಯಾ ನನ್ನ
ನಿನ್ ಎದುರಲೇ ನಿಂತು ನಿನ್ನವನೆಂದು
ನೆನಪಿಸುತಿಹೇ ನಾ ! ಕ್ರೋಧದಿ ತೋರುವ
ಪ್ರೀತಿಯನ್ನು ನಿನ್ನಲ್ಲಿ ಕಂಡೆ ನಾ

ನೀ ಮರೆತು ಮರೆಯಾದರು ಈ
ಹೃದಯ ನಿನ್ನದೆಂದು ಮೌನಿಯಾಗಿಹೆ ನಾ
ದುಃಖದ ಕಡಲಲಿ ಕೊನೆಯಾಯಿತು
ನನ್ನ ಪ್ರೀತಿಯ ಪಯಣ

ಪ್ರೀತಿ ಹುಟ್ಟಿತೆಂದು
ಹೇಳಲಾರದೆ ನಿಂದೆ ನೀ
ಕೊಳಲ ನಾದಕೆ ಮೈ ಮರೆತು
ಸಖನ ರಾಸಲೀಲೆಯೊಳು ಮುಳುಗಿಹೆ ನೀ

ಪ್ರೀತಿಗೆ ಮೋಹವೆಂದ ನಾ
ಅವಳ ಮನಸ ಸೂರೆಗೊಳಿಸಿದವ ನಾ
ನಾನವಳ ಮನದೊಡೆಯನಾದರೇನು
ರಾಧೆ ನನ್ನವಳಲ್ಲ

ಆನಂದ ಬಬಲಿ, ನಾಗನೂರ
ಜಿಲ್ಲಾ – ಬೆಳಗಾವಿ

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group