spot_img
spot_img

ರಥ ಸಪ್ತಮಿ ಆಚರಣೆ: 2021 ಫೆಬ್ರವರಿ 19 ಶುಕ್ರವಾರ.

Must Read

- Advertisement -

ಮಾಘಮಾಸದ ಶುಕ್ಲಪಕ್ಷ ಸಪ್ತಮಿಯಂದು ಸೂರ್ಯನ ಜನನ ವಾಯಿತು. ಕಶ್ಯಪ ಮತ್ತು ಅದಿತಿ ದೇವಿಯರ ಪುತ್ರ.

ಹುಟ್ಟಿದೊಡನೆ ಏಳು ಅಶ್ವಗಳು ಎಳೆಯುವ ರಥವನ್ನೇರಿ , ಏಳು ಲೋಕಗಳ ಸಂಚಾರಕ್ಕೆ ಹೊರಟ. ಆದಕ್ಕೆ ಇದು ರಥಸಪ್ತಮಿ.

ಶಿವನಿಗೆ ಹೇಗೆ ‘ಬಿಲ್ವಪತ್ರೆ ’ಪ್ರಿಯವೊ, ವಿಷ್ಣವಿಗೆ’ತುಳಸಿ’ ಪ್ರಿಯವೊ ಹಾಗೆ ಸೂರ್ಯನಿಗೆ ‘ಅರ್ಕ’ದ ಎಲೆ ಪ್ರಿಯವಂತೆ.

- Advertisement -

ಸ್ನಾನ ಕ್ರಮ:

ಆಚಮನಾದಿಗಳನ್ನು ಮಾಡಿ, ಸಂಕಲ್ಪದಲ್ಲಿ ……ಮುಖ್ಯಪ್ರಾಣಾಂತರ್ಗತ ಸವಿತೃನಾಮಕ ಶ್ರೀ ಲಕ್ಷ್ಮೀನಾರಾಯಣ ಪ್ರೇರಣಯಾ ಶ್ರೀ ಲಕ್ಷ್ಮೀನಾರಾಯಣ ಪ್ರಿತ್ಯರ್ಥಂ ರಥಸಪ್ತಮೀ ಮಹಾಪರ್ವಕಾಲನಿಮಿತ್ತ ಅರುಣೋದಯೇ ಮಾಘಸ್ನಾನಂ ಕರಿಷ್ಯೇ’ ಎಂದು ಸೇರಿಸಿಕೊಳ್ಳಬೇಕು.

ನದಿಗಳಲ್ಲಿ ಪ್ರವಾಹಾಭಿಮುಖವಾಗಿ, ಇತರ ಜಲಾಶಯಗಳಲ್ಲಿ ಸೂರ್ಯಾಭಿಮುಖವಾಗಿ ಮುಳುಗಬೇಕು. ಪ್ರತೀ ಒಬ್ಬರು ಮಾಡಲೇ ಬೇಕಾದ ವೃತ ಇದು. ರಥ ಸಪ್ತಮೀ ದಿನ ತೀರ್ಥ ಸ್ನಾನಕ್ಕೆ ಬಹಳ ಮಹತ್ವವಿದೆ . ಆದಿನ ಎಲ್ಲಿಯೂ ತೀರ್ಥಸ್ನಾನಕ್ಕೆ ಹೋಗಲು ಅನಕೂಲವಾಗದಿದ್ದರೆ ಮನೆಯಲ್ಲೇ ಸ್ನಾನದ ವಿಧಿಯನ್ನು ಮಾಡಿ …

ರಥಸಪ್ತಮಿ ದಿನ ಏಳು ಅರ್ಕದ ಎಲೆಗಳನ್ನು (ಒಂದು ತಲೆಯ ಮೇಲೆ, ಎರಡೆರಡುಭುಜಗಳು಼, ಎದೆ, ಪಾದಗಳಲ್ಲಿ ಎರಡು, ಹಾಗೂ ತೊಡೆಗಳಮೇಲೆ) ಇಟ್ಟು ಕೊಂಡು ಏಳು ಸಲ ನದಿ ನೀರಿನಲ್ಲಿ ಅಥವಾ ಸರೋವರಗಳಲ್ಲಿ ಮುಳುಗಿ ಸ್ನಾನ ಮಾಡಿದರೆ ಏಳು ಜನ್ಮಗಳ ಷಾಪ ಪರಿಹಾರವಾಗುತ್ತದೆ ಎಂದು ಹೇಳುತ್ತಾರೆ.ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು಼, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೀಗಾಗಿಯೇ ಈ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

- Advertisement -

ಪಾಪಗಳಲ್ಲಿ ಏಳು ವಿಧ :

  1. ಈ ಜನ್ಮದಲ್ಲಿ ಮಾಡಿದ ಪಾಪಗಳು,
  2. ಹಿಂದಿನ ಆರು ಜನ್ಮಗಳ ಪಾಪಗಳು,
  3. ಕಾಯ(ಶರೀರದ/ದೇಹದ) ಮೂಲಕಮಾಡಿದ ಪಾಪಗಳು
  4. ವಾಚ( ಮಾತಿನ) ಮೂಲಕ ಮಾಡಿದ ಪಾಪಗಳು
  5. ಮನಸಾ(ಮನಸಿನ) ಮೂಲಕ ಮಾಡಿದ ಪಾಪಗಳು
  6. ತಿಳಿದು ಮಾಡಿದ ಪಾಪಗಳು
  7. ತಿಳಿಯದೇ ಮಾಡಿದ ಪಾಪಗಳು.

ಸ್ನಾನದ ವಿಧಿ ಸಂಕಲ್ಪ….

ಮಮ ಇಹ ಜನ್ಮನಿ ಜನ್ಮಾಂತರೇ ಚ ಸಪ್ತವಿಧವಾಪಕ್ಷಯಾರ್ಥಂ ತೀರ್ಥ ಸ್ನಾನಂ ಕರಿಷ್ಯೇ.

ರಥಸಪ್ತಮಿ ಮಂತ್ರಗಳು :

ಏಳುಬಗೆಯ ಪಾಪಪರಿಹಾರಕ್ಕಾಗಿ ಏಳುಬಾರಿ ಮುಳಗಬೇಕು. ಆ ಪಾಪಗಳನ್ನು ಉಲ್ಲೇಖಿಸಿ, ಅವುಗಳಿಂದ ಪರಿಹಾರ ಒದಗಿಸುವಂತೆ ಪ್ರಾರ್ಥಿಸುತ್ತ ಪಠಿಸಬೇಕಾದ ಮಂತ್ರಗಳು ಹೀಗಿವೆ:

ಯದಾಜನ್ಮಕೃತಂ ಪಾಪಂ ಮಯಾ ಜನ್ಮಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ ||
ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ |
ಮನೋವಾಕ್ಕಾಯಜಂ ಯಚ್ಚ ಜ್ಞಾತಾಜಾತೆ ಚ ಯೇ ಪುನಃ ||
ಇತಿ ಸಪ್ತವಿಧಂ ಪಾಪಂ ಸ್ನಾನಾಮ್ನೇ ಸಪ್ತ ಸಪ್ತಿಕೇ |
ಸಪ್ತವ್ಯಾದಿಸಮಾಯುಕ್ತಂ ಹರ ಮಾಕರಿ ಸಪ್ತಮೀ ||

ಮಾ – ಎಂದರೆ ಸಂಪತ್ತು ಹಾಗೂ ವಿದ್ಯೆ – ಇವೆರಡನ್ನೂ ನೀಡಬಲ್ಲ ರಥಸಪ್ತಮಿಯ ಅಭಿಮಾನಿದೇವತೆ ಸೂರ್ಯನನ್ನು ಸಂಬೋಧಿಸಿ, ತಾನು ಎಸಗಿದ ಏಳು ಬಗೆಯ ಪಾಪದ ಪರಿಹಾರಕ್ಕಾಗಿ ನಿವೇದಿಸಿಕೊಳ್ಳಲಾಗುವದು.

ನಂತರ ಯಥಾ ಶಕ್ತಿ ಯಿಂದು ಒಂದು ಮಣೆ ಮೇಲೆ ಸೂರ್ಯ ರಥದಲ್ಲಿರುವಂತೆ ರಂಗವಲ್ಲಿಹಾಕಿ …..ಪ್ರಾರ್ಥನೆ ಮಾಡಿಕೊಳ್ಳಬೇಕು ..

ಜನನಿ ಸರ್ಮ ಲೋಕಾನಾಂ ಸಪ್ತಮೀ ಸಪ್ತಸಪ್ತಿಕೆ l
ಸಪ್ತವ್ಯಾಹೃತಿಕೇ ದೇವಿ ನಮಸ್ತೇ ಸೂರ್ಯ ಮಂಡಲೇ ll

ನಂತರ ಗಂಧ ಅಕ್ಷತೆ ಹೂವುಗಳಿಂದ ಪೂಜಿಸಿ ನಮಸ್ಕಾರ ಮಾಡಿ,

ನಮಃ ಸವಿತ್ರೇ ಜಗದೇಕ ಚಕ್ಷುಷೇ ಜಗತ್ ಪ್ರಸೂತಿಸ್ಥಿತಿ ನಾಶಹೇತವೇ lತ್ರಯಾಮಯಾಯ ತ್ರಿಗುಣಾತ್ಮ ಧಾರಿಣೆ
ವಿರಿಂಚಿನಾರಾಯಣ ಶಂಕರಾತ್ಮನೇ ll

ಸೂರ್ಯಾಂತರ್ಗತ ಸವಿತೃನಾರಾಯಣನಿಗೆ ಅರ್ಘ್ಯ:

ಸೂರ್ಯಾಂತರ್ಗತ ಸವಿತೃನಾರಾಯಣನಿಗೆ ಹೀಗೆ ಅರ್ಘ್ಯ ಕೊಡಬೇಕು: 

ಇದಮರ್ಘ್ಯಂ ದತ್ತಂ ನಮಮ
ಮಿತ್ರಾಯ ನಮಃ
ರವಯೇ ನಮಃ.
ಸೂರ್ಯಾಯ ನಮಃ
ಭಾನವೇ ನಮಃ
ಖಗಾಯ ನಮಃ
ಪೂಷ್ಣೇ ನಮಃ
ಹಿರಣ್ಯಗರ್ಭಾಯ ನಮಃ
ಮರೀಚಯೇ ನಮಃ
ಆದಿತ್ಯಾಯ ನಮಃ
ಸವಿತ್ರೇ ನಮಃ
ಅರ್ಕಾಯ ನಮಃ
ಭಾಸ್ಕರಾಯ ನಮಃ
ಇದಮರ್ಘ್ಯಂ ದತ್ತಂ ನಮಮ

ನಂತರ ಇದ್ದಿಲು ಒಲೆ ಇಟ್ಟು ರಂಗವಲ್ಲಿಹಾಕಿ ಇದ್ದಿಲು ಹಾಕಿ ಹಚ್ಚಿ ಅದಕ್ಕೆ ಅರಿಷಿಣ ಕುಂಕುಮ ಎರಿಸಿ ಪೂಜಿಸಿ ಹಾಲನ್ನು ಉಕ್ಕಿಸಿ ಅದೇ ಹಾಲಿನಿಂದ ಗೋದಿ ಪಾಯಸ ಮಾಡಿ ಸೂರ್ಯನಿಗೆ ನೈವೇದ್ಯ ಮಾಡಿದಲ್ಲಿ ಖಂಡಿತ ನಮ್ಮ ದಾರಿದ್ರ್ಯ ಹೋಗುತ್ತದೆ಼….

ಸಪ್ತಸಪ್ತಿಬಹುಪ್ರೀತ ಸರ್ವಲೋಕಪ್ರದೀಪನ |
ಸಪ್ತಮೀಸಹಿತೋ ದೇವ ಗೃಹಣಾರ್ಘ್ಯಂ ದಿವಾಕರ ||

ರಥ ಸಪ್ತಮಿ ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

ಬಾಲ್ಯದಲ್ಲಿ ಅಜ್ಜಿ ಪಾಡ್ಯ, ಬಿದಿಗೆ, ತದಿಗೆ… ಅಮಾವಾಸ್ಯೆಯವರೆಗೆ ಕಂಠಪಾಠ ಮಾಡಿಸುವಾಗ ಒಂದೊಂದು ತಿಥಿಗೂ ಒಂದೊಂದು ಹಬ್ಬವನ್ನು ಸೇರಿಸಿ ಹೇಳಿಕೊಡುತ್ತಿದ್ದರು.

ಪಾಡ್ಯ- ಯುಗಾದಿ ಪಾಡ್ಯ,
ಬಿದಿಗೆ-ಭಾನು ಬಿದಿಗೆ,
ತದಿಗೆ-ಅಕ್ಷ ತದಿಗೆ,
ಚೌತಿ-ವಿನಾಯಕನ ಚೌತಿ. .
ಹೀಗೆ
‘ಸಪ್ತಮಿ’ಯ ಸರದಿ ಬಂದಾಗ ರಥಸಪ್ತಮಿ ಸೇರಿಕೊಳ್ಳುತ್ತಿತ್ತು. ಸಮಯ ಸಿಕ್ಕಾಗಲೆಲ್ಲ ಹಬ್ಬಗಳ ಮಹತ್ವದ ಬಗ್ಗೆ ವಿವರಿಸುತ್ತಿದ್ದರು.
ಹಬ್ಬಗಳು ಪ್ರತಿವರ್ಷ ಬರುತ್ತವೆ, ಹೋಗುತ್ತವೆ. ಆದರೆ ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ಅರಿತಾಗ ಅರ್ಥಪೂರ್ಣ ಆಚರಣೆಯಾಗುತ್ತದೆ.

ಯುಗಾದಿ ಹೊಸತನವನ್ನು ಹೊತ್ತು ತಂದರೆ,
ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ.
“ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನಂತೆ” ಅಂತ ಅಜ್ಜಿ ಹೇಳುತ್ತಿದ್ದುದು ನೆನಪಾಗುತ್ತದೆ.

ಅಲ್ಲದೆ ಈ ದಿನವನ್ನು ಸೂರ್ಯನ ಜನ್ಮದಿನವೆಂದೂ ಪ್ರಾಜ್ಞರು ಹೇಳುತ್ತಾರೆ. ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು. ಅದು ನಿತ್ಯ ನವೀನ. ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟಿ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ. ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ.

ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ಇಂದು (ಮಾಘ ಮಾಸ, ಶುಕ್ಲಪಕ್ಷದ ಸಪ್ತಮಿ ತಿಥಿ-ಶುಕ್ರವಾರ ) ದೇಶಾದ್ಯಂತ ರಥಸಪ್ತಮಿ ಆಚರಿಸಲಾಗುತ್ತಿದೆ.

ಆರೋಗ್ಯಂ ಭಾಸ್ಕರಾದಿಚ್ಛೇತ್… ಚಳಿಗಾಲದಲ್ಲಿ ಮುದುಡುವ ಶರೀರ, ರಥಸಪ್ತಮಿಯ ಬಳಿಕ ಸೂರ್ಯನ ಶಾಖದಿಂದಾಗಿ ನವಚೈತನ್ಯ ತುಂಬಿಕೊಳ್ಳುತ್ತದೆ. ‘ಆರೋಗ್ಯಂ ಭಾಸ್ಕರಾದಿಚ್ಛೇತ್’ ಅಂದರೆ ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿಯಯೂ ಇದು ಸಾಬೀತಾಗಿದೆ. ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ಼. ಚಂದ್ರನ ಬೆಳಕಿನಲ್ಲಿ ವಿಟಮಿನ್ ‘ಬಿ 12’ ಇದ್ದರೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ‘ಡಿ’ ಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧ ನೆ ಬಳಕೆಗೆ ಬರುವ ಮುಂಚಿನಿಂದಲೂ ಪ್ರಾಶಸ್ತ್ಯವಿದೆ. ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿಯೂ ಹೇಳಲಾಗಿದೆ. ರೋಗ ನಿವಾರಣೆ, ದೇಹದಾರ್ಡ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ.

ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ಼. ರೋಗದಿಂದ ನರಳುವವರು ರಥಸಪ್ತಮಿಯ ದಿನದಿಂದಲಾದರೂ ಸೂರ್ಯಾರಾಧನೆಯನ್ನು ಮಾಡಿದರೆ ಅರ್ಥಾತ್ ಆತನ ಕಿರಣಗಳಿಗೆ ಸೂಕ್ತ ವೇಳೆಯಲ್ಲಿ ಮೈಯೊಡ್ಡಿದರೆ ಬೇಗ ಗುಣಹೊಂದುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಸೂರ್ಯರಾಧನೆಯನ್ನು ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.

ಸೂರ್ಯ ನಮಸ್ಕಾರ

108 ಸೂರ್ಯ ನಮಸ್ಕಾರ ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕಿದೆ. ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ.

ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ. ಹೀಗಾಗಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರಗಳು ಹಾಗೂ ಸಪ್ತಾಶ್ವಗಳ ಪ್ರತೀಕವಾಗಿ ಸಪ್ತ ನಮಸ್ಕಾರಗಳನ್ನು ಮಾಡುವ ಅಭ್ಯಾಸವಿದೆ.

ಪೌರಾಣಿಕ ಹಿನ್ನೆಲೆ

ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮನನಿಗೆ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಈ ಬಗ್ಗೆ ಜ್ಯೋತಿಷಿಗಳಿಂದ ಮಾಹಿತಿ ಪಡೆದು ಸಂಚಿತಕರ್ಮದಿಂದ ಬಂದಿರುವ ಕಾಯಿಲೆಗೆ ರಥಸಪ್ತಮಿ ವ್ರತ ಚರಿಸಲು ಹೇಳಿದ್ದರು. ಅದರಂತೆ ಅಂದು ಸೂರ್ಯಾರಾಧನೆ ಮಾಡಲಾಗಿ ರಾಜ ಪು಼ತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದನು. ಅಲ್ಲದೆ ಪಾಂಡವರು ವನವಾಸದಲ್ಲಿ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು.ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯಹೃದಯದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ.

ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ಼.

ರಥಸಪ್ತಮಿಯಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಸಾರಿ ಸಾರಿ ಹೇಳುತ್ತಿವೆ. ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ.

ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ. ಇನ್ನು, ‘ಭೂರ್ಭುವಸ್ವಃ’. . . ಎಂಬ ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುತ್ತದೆ.

ಎಕ್ಕದೆಲೆಯ ಸ್ನಾನ

ಸೂರ್ಯನ ಕಿರಣಗಳಲ್ಲಿನ ಸತ್ವಗಳನ್ನು ಹೀರಿಕೊಂಡಿರುವ ಅರ್ಕದೆಲೆ ಅಥವಾ ಎಕ್ಕದೆಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲಿರಿಸಿ ಸ್ನಾನ ಮಾಡುವುದು ರಥಸಪ್ತಮಿಯ ವಿಶೇಷತೆಗಳಲ್ಲೊಂದು. ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೀಗಾಗಿಯೇ ಈ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

ದೇವರೆಲ್ಲಿದ್ದಾನೆ ಎಂದು ಪ್ರಶ್ನಿಸುವ ಬದಲು ಪ್ರತ್ಯಕ್ಷವಾಗಿ ಕಾಣುವ ದೈವೀ ಸ್ವರೂಪಗಳಾದ, ಯಾವುದೇ ಜಾತಿಭೇದ, ಧರ್ಮದ ಚೌಕಟ್ಟಿಲ್ಲದ ಸೂರ್ಯ, ಚಂದ್ರ, ವೃಕ್ಷ, ಬೆಟ್ಟ, ನದೀನದಗಳ ಆರಾಧನೆಯನ್ನು ನಮ್ಮ ಪೂರ್ವಿಕರು ಆಚರಣೆಗೆ ತಂದಿರುವುದು ಎಷ್ಟೊಂದು ಅರ್ಥಪೂರ್ಣವಾಗಿದೆಯಲ್ಲವೇ?

ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪ ವಸುಂಧರ ಸಪ್ತರ್ಕ ಪುನಮಾಧ್ಯಾಯ ಸಪ್ತಮಿ ರಥಸಪ್ತಮಿ

ಎಂದು ಈ ಶ್ಲೋಕವನ್ನು ಹೇಳಿಕೊಂಡು
ತಲೆಗೆ ಸ್ನಾನ ಮಾಡಿದರೆ ಒಳ್ಳೆಯದು ಎಂದು ನಮ್ಮ ಹಿಂದೂ ಸಂಪ್ರದಾಯ ಹೇಳುವು಼ದು.

(ಸಂಗ್ರಹ; ಎಮ್ ವೈ ಮೆಣಸಿನಕಾಯಿ, ಬೆಳಗಾವಿ)

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group