ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ – ಖಂಡ್ರೆ

Must Read

ಬೀದರ – ಐದು ವರ್ಷ ಸಿಎಂ ಆಗಿರಲಿಕ್ಕೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆಯ ಬಗ್ಗೆ ಸಚಿವ ಈಶ್ವರ ಖಂಡ್ರೆ ಏನೂ ಪ್ರತಿಕ್ರಿಯೆ ನೀಡದೆ ನಡೆದುಬಿಟ್ಟರು.

ಪತ್ರಕರ್ತರೊಡನೆ ಮಾತನಾಡುತ್ತಿದ್ದ ಅವರು, ಸಂಪುಟ ವಿಸ್ತರಣೆ ಸಿಎಂ ಅವರ ಪರಮಾಧಿಕಾರ ಅವರ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದರು.

ಸಿದ್ಧರಾಮಯ್ಯ ಅವರು ಜನಪ್ರೀಯ ನಾಯಕರು, ಜನಮಾನಸದ ನಾಯಕರು ಇನ್ನೂ ಅನೇಕ ವರ್ಷ ರಾಜಕಾರಣ ಮಾಡಬೇಕೆಂಬುದು ನಮ್ಮೆಲ್ಲರ ಆಸೆಯಾಗಿದೆ ಅವರ ನಾಯಕತ್ವದಲ್ಲಿ, ಮಾರ್ಗದರ್ಶನದಲ್ಲಿ ನಾವು ಮುಂದುವರೆಯುತ್ತೇವೆ ಎಂದು ಖಂಡ್ರೆ ಹೇಳಿದರು.

ಆದರೆ ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ಧರಾಮಯ್ಯ ಹೇಳಿಕೆಯ ಬಗ್ಗೆ ಅವರು ಪ್ರತಿಕ್ರಿಯೆ ನೀಡದೇ ಬಿರಬಿರನೇ ನಡೆದುಬಿಟ್ಟರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group