Homeಸುದ್ದಿಗಳುರಸ್ತೆ ಸುಧಾರಣೆಗೆ ಆರ್ ಡಿಪಿಆರ್ ನಿಂದ ೧೦ ಕೋ. ರೂ. ಬಿಡುಗಡೆ - ಬಾಲಚಂದ್ರ ಜಾರಕಿಹೊಳಿ

ರಸ್ತೆ ಸುಧಾರಣೆಗೆ ಆರ್ ಡಿಪಿಆರ್ ನಿಂದ ೧೦ ಕೋ. ರೂ. ಬಿಡುಗಡೆ – ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಆರ್ ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಮಂಗಳವಾರದಂದು ೧.೨೦ ಕೋಟಿ ರೂಪಾಯಿ ವೆಚ್ಚದ ತಾಲ್ಲೂಕಿನ ಕೌಜಲಗಿ- ಹೊನಕುಪ್ಪಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯಾದವಾಡ ಮುಖ್ಯ ರಸ್ತೆಯಿಂದ ಕುಲಗೋಡ ಹಣಮಂತ ದೇವಸ್ಥಾನ ಹೊಸಟ್ಟಿ ಕೂಡು ರಸ್ತೆಗೆ ೬೦ ಲಕ್ಷ ರೂಪಾಯಿ, ಮುನ್ಯಾಳ ಲಕ್ಷ್ಮೀದೇವಿ ಗುಡಿಯಿಂದ ರಂಗಾಪೂರ ಕಮಲದಿನ್ನಿ ಮುಖ್ಯ ರಸ್ತೆಗೆ ೧.೨೦ ಕೋಟಿ ರೂಪಾಯಿ, ಯಾದವಾಡ ಒಂಟಗೋಡಿ ರಸ್ತೆ ಡಾಂಬರೀಕರಣಕ್ಕೆ ೧.೮೦ ಕೋಟಿ ರೂಪಾಯಿ, ಯಾದವಾಡ ಹರಿಜನ ಕೇರಿಯಿಂದ ಮುಧೋಳ ರಸ್ತೆ ತನಕ ೬೦ ಲಕ್ಷ ರೂಪಾಯಿ, ತಿಗಡಿಯಿಂದ ವಾಲೀಕಾರ ತೋಟದತನಕ ೬೦ ಲಕ್ಷ ರೂಪಾಯಿ, ಅರಭಾವಿ ಸತ್ತಿಗೇರಿ ಮಡ್ಡಿ ರಸ್ತೆ ಡಾಂಬರೀಕರಣಕ್ಕೆ ೧ ಕೋಟಿ ರೂಪಾಯಿ, ಯಾದವಾಡ ಸಂಗನಕೇರಿ ರಸ್ತೆಯಿಂದ ಫುಲಗಡ್ಡಿ ಕೂಡು ರಸ್ತೆಗೆ ೧.೨೦ ಕೋಟಿ ರೂಪಾಯಿ, ರಂಗಾಪೂರ ರಸ್ತೆಗೆ ೬೦ ಲಕ್ಷ ರೂಪಾಯಿ ಸೇರಿದಂತೆ ಒಟ್ಟು ೧೦ ಕೋಟಿ ರೂಪಾಯಿ ಅನುದಾನವು ಬಿಡುಗಡೆಗೊಂಡಿದೆ ಎಂದು ಮಾಹಿತಿ ನೀಡಿದರು.

ಉತ್ತಮ ಗುಣಮಟ್ಟದ ರಸ್ತೆಯ ಕಾಮಗಾರಿಯನ್ನು ಕೈಕೊಳ್ಳಬೇಕು. ಅವಧಿಗೂ ಮುನ್ನ ಕೆಲಸವನ್ನು ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಭಾ ಶುಗರ್ ನಿರ್ದೇಶಕ ಎಂ.ಆರ್. ಭೋವಿ, ಜಿ.ಪಂ. ಮಾಜಿ ಸದಸ್ಯರಾದ ರಾಜೇಂದ್ರ ಸಣ್ಣಕ್ಕಿ, ಪರಮೇಶ್ವರ ಹೊಸಮನಿ, ರವಿ ಪರುಶೆಟ್ಟಿ, ಎಂ.ಎನ್.ಶಿವನಮಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಅಶೋಕ ಉದ್ದಪ್ಪನವರ, ರಾಯಪ್ಪ ಬಳೋಳದಾರ, ನೀಲಪ್ಪ ಕೇವಟಿ,ಹೊಳೆಪ್ಪ ಲೋಕನ್ನವರ, ಸಿದ್ದಪ್ಪ ಹಳ್ಳೂರ, ಮಹೇಶ ಪಟ್ಟಣಶೆಟ್ಟಿ, ಬಿ.ಎಚ್.ಪಾಟೀಲ, ವೆಂಕಟೇಶ ದಳವಾಯಿ, ಶಂಕರ ಜೋತಿನವರ, ಶಾಂತಪ್ಪ ಹಿರೇಮೇತ್ರಿ, ಅವ್ವಣ್ಣ ಮೋಡಿ, ಬಸು ಜೋಗಿ, ಹಾಸೀಮ ನಗಾರ್ಚಿ, ಶ್ರೀಶೈಲ ಗಾಣಿಗೇರ, ಗ್ರಾಮ ಪಂಚಾಯತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group