ಬೀದರ – SORRY ಮಮ್ಮಿ, ಪಪ್ಪಾ i love you ಎಂದು ಡೆತ್ ನೋಟ್ ಬರೆದಿಟ್ಟು 10 ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜರುಗಿದೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಶರತ್ ತಂದೆ ಪರಮೇಶ್ವರ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ಸ್ಥಳಕ್ಕೆ ಬಸವಕಲ್ಯಾಣ ನಗರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಬಾಲಕನ ಶವವನ್ನು ಶವಾಗಾರಕ್ಕೆ ರವಾನಿಸಿದರು. ಬೆಳೆದು ನಿಂತ ಬಾಲಕನ ದುರಂತ ಅಂತ್ಯಕ್ಕೆ ಕುಟುಂಬದವರ ಶೋಕ ಮುಗಿಲು ಮುಟ್ಟಿತ್ತು.
ವರದಿ : ನಂದಕುಮಾರ ಕರಂಜೆ, ಬೀದರ

