1000 ಮೀಟರ್ ರಾಷ್ಟ್ರಧ್ವಜಕ್ಕೆ ಚಾಲನೆ

Must Read

ಬೀದರ – ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ 1000 ಮೀ ರಾಷ್ಟ್ರಧ್ವಜ ವಾಕಥಾನ್ ಗೆ ಶಾಸಕ ಶರಣು ಸಲಗರ ಚಾಲನೆ ನೀಡಿದರು.

ಬಸವಕಲ್ಯಾಣ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 1000 ಮೀ ರಾಷ್ಟ್ರಧ್ವಜ‌ ವಾಕಥಾನ್ ಗೆ ಪಟ್ಟಣದ ಕೋಟೆ ಆವರಣದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

ರಾಷ್ಟ್ರಧ್ವಜದೊಂದಿಗಿನ ನಡಿಗೆ ಬಸವಕಲ್ಯಾಣ ಕೋಟೆ ರಸ್ತೆಯಿಂದ ಪಟ್ಟಣದ ಪ್ರಮುಖ ವೃತ್ತದ ಮೂಲಕ ತಹಶೀಲ್ದಾರ ಕಚೇರಿ ಆವರಣ ತಲುಪಿತು.

ಸುಮಾರು 1 ಕಿ.ಮೀ. ದೂರದ ರಾಷ್ಟ್ರಧ್ವಜವನ್ನು ಶಾಸಕ ಶರಣು ಸಲಗಾರ ಸೇರಿ ತಹಶೀಲ್ದಾರ ಸಾವಿತ್ರಿ ಸಲಗರ ಸೇರಿದಂತೆ ಸರಕಾರಿ ಮತ್ತು ಖಾಸಗಿ ಶಾಲಾ-ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕರ್ತರು, ಶಿಕ್ಷಕರು ಕೈಯಲ್ಲಿ ಧ್ವಜ ಹಿಡಿದುಕೊಂಡು ದೇಶ ಪ್ರೇಮದ ಘೋಷಣೆಗಳನ್ನು ಕೂಗುತ್ತಾ ಉತ್ಸಾಹದಿಂದ ಪಾಲ್ಗೊಂಡು ಸಾರ್ವಜನಿಕರ ಗಮನ ಸಳೆದರು.


ವರದಿ: ನಂದಕುಮಾರ ಕರಂಜೆ,ಬೀದರ

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group