spot_img
spot_img

ಪಾರಿಜಾತ ಹುಟ್ಟೂರಿನಲ್ಲಿ 18ನೇ ವರ್ಷದ ಪಾರಿಜಾತ ಉತ್ಸವ

Must Read

spot_img
- Advertisement -

ಮೂಡಲಗಿ:- ಪ್ರತಿ ವರ್ಷದಂತೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಶ್ರೀಕೃಷ್ಣ ಪಾರಿಜಾತ ತವರೂರಾದ ಕುಲಗೋಡ ಗ್ರಾಮದ ಕುಲಗೋಡ ತಮ್ಮಣ್ಣ ಬಯಲು ರಂಗ ಮಂದಿರದಲ್ಲಿ, ಶುಕ್ರವಾರ ದಿ.7ರಂದು ಸಾಯಂಕಾಲ 6ಗಂಟೆಗೆ, 18ನೇ ವರ್ಷದ ಪಾರಿಜಾತ ಉತ್ಸವ ಜರುಗಲಿದೆ ಎಂದು ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ರಮೇಶ ಲವಪ್ಪ ಕೌಜಲಗಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟಕರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಎಚ್.ಭಜಂತ್ರಿ, ಮುಖ್ಯ ಅತಿಥಿಯಾಗಿ ಡಾ.ಶ್ರೀರಾಮ ಇಟ್ಟಣ್ಣವರ, ಶ್ರೀಕಾಂತ ನಾಯಕ, ಅಶೋಕ್ ನಾಯಕ, ಡಾ.ಬಿ.ವಿ.ದೇವರ, ಬಸನಗೌಡ ಪಾಟೀಲ್, ಸುಭಾಸ್ ವಂಟಗೋಡಿ, ಸತೀಶ್ ವಂಟಗೋಡಿ, ಸುನಿಲ್ ವಂಟಗೋಡಿ, ಗೋವಿಂದ ಕೊಪ್ಪದ ಸೇರಿದಂತೆ ಗ್ರಾಮದ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಉತ್ಸವದ ಮುಖ್ಯ ಭಾಗವಾಗಿ ಶ್ರೀ ಬಲಭೀಮ ಕೃಪಾಪೋಷಿತ ಕುಲಗೋಡ ತಮ್ಮಣ್ಣ ಶ್ರೀ ಕೃಷ್ಣ ಪಾರಿಜಾತ ಕಂಪನಿ ನಾಮ ಫಲಕವನ್ನು ಶ್ರೀ ಬಲಭೀಮ ದೇವರ ಪ್ರಧಾನ ಅರ್ಚಕರಾದ ಶ್ರೀ ಭೀಮಪ್ಪ.ರಾ.ಪೂಜೇರ ಲೋಕಾರ್ಪಣೆಗೊಳಿಸಲಿದ್ದು, ಕುಲಗೋಡ ಸೇರಿದಂತೆ ಗ್ರಾಮದ ಸುತ್ತಮುತ್ತಲಿನ ಜನ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಆಯೋಜಕರು ತಿಳಿಸಿದ್ದಾರೆ.

- Advertisement -
- Advertisement -

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -

More Articles Like This

- Advertisement -
close
error: Content is protected !!
Join WhatsApp Group