Monthly Archives: January, 2022

ತಹಶೀಲ್ದಾರ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು

ಬೀದರ - ಗಣರಾಜ್ಯೋತ್ಸವ ಸಂದರ್ಭದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದರೆನ್ನಲಾದ ಹಿನ್ನೆಲೆಯಲ್ಲಿ ತಹಸೀಲ್ದಾರ ಮೇಲೆ ದಲಿತಪರ ಸಂಘಟನೆಗಳ ಕಾರ್ಯಕರ್ತ ರಿಂದ ಹಲ್ಲೆ ಮಾಡಿದ ಘಟನೆ ಜರುಗಿದೆ.ಬೀದರ್ ಜಿಲ್ಲೆಯ ಹುಮನಾಬಾದ ತಾಲ್ಲೂಕು ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಹುಮನಾಬಾದ್ ತಹಶೀಲ್ದಾರ ಪ್ರದೀಪಕುಮಾರ್ ಮಠಪತಿ ಅವರ ಮೇಲೆ...

ಶಹನಾಹಿ ಮಾಂತ್ರಿಕ ಬಾಳಪ್ಪ ಭಜಂತ್ರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಬೆಳಗಾವಿ ಜಿಲ್ಲಾ ಕಸಾಪ ಅಭಿನಂದನೆ

ಬೆಳಗಾವಿ : ಜಿಲ್ಲೆಯ ಬಾಳಪ್ಪ ಭಜಂತ್ರಿ ಅವರಿಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರತ ಸರ್ಕಾರ ಘೋಷಿಸುವ ೨೦೨೨ನೇ ಸಾಲಿನ ‘ಪದ್ಮಶ್ರೀ’ ಪ್ರಶಸ್ತಿಯು ಲಭಿಸಿದೆ.ಬಾಳಪ್ಪ ಭಜಂತ್ರಿ ಅವರು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದವರೆಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀ ಮೆಟಗುಡ್ಡ ಹರ್ಷ...

ಜ.30 ಸರ್ವೋದಯ ದಿನದ ಅಂಗವಾಗಿ ಏರ್ಪಡಿಸಿದ್ದ ಗಾಂಧೀ ಲೇಖನ ಸ್ಪರ್ಧೆ ಫಲಿತಾಂಶ ಪ್ರಕಟ

ಜ.30 ಸರ್ವೋದಯ ದಿನದ ಅಂಗವಾಗಿ ಗಾಂಧೀ ಶಾಂತಿ ಪ್ರತಿಷ್ಠಾನ ಮತ್ತು ಅಮರ ಬಾಪು ಚಿಂತನ ಸಹಯೋಗಯಲ್ಲಿ ನಡೆದ ‘ಅಂದಿಗೂ ಇಂದಿಗೂ ಗಾಂಧೀಜಿ ವಿಚಾರಧಾರೆಗಳು ಪ್ರಸ್ತುತ’ ಪ್ರಬಂಧ ಹಾಗೂ ‘ಗಾಂಧಿಗೆ ಒಂದು ಪತ್ರ’ ಈ ಎರಡು ಕನ್ನಡ ಲೇಖನ ಸ್ಪರ್ಧೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದ ಎಲ್ಲೆಡೆಯಿಂದ ಅಧಿಕ ಯುವಜನರು ಪಾಲ್ಗೊಂಡಿರುತ್ತಾರೆ.15 ರಿಂದ 30...

ಬಿಜೆಪಿ ಬಿಡುವುದಿಲ್ಲ, ಬೇರೆ ಪಕ್ಷ ಸೇರುವುದಿಲ್ಲ, ಇದು ವಿರೋಧಿಗಳ ಅಪಪ್ರಚಾರ – ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಯಾರು ಎಷ್ಟೇ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದರೂ 2023 ರಲ್ಲಿ ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.ನಗರದಲ್ಲಿ ಗುರುವಾರದಂದು ಜರುಗಿದ ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಈಗಾಗಲೇ ಪಕ್ಷ ಬಿಡುತ್ತಿದ್ದೇನೆ...

ಏಕತೆ ಸಾರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ

ಮೂಡಲಗಿ: ದೇಶದ ಪ್ರಜೆಗಳು ಭಾರತದ ಸಂವಿಧಾನ ನೀಡಿರುವ ಶಾಸನಬದ್ಧ ಹಕ್ಕುಗಳ ಸದುಪಯೋಗದ ಜೊತೆಗೆ ಶಾಸನಬದ್ಧ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ಇಲ್ಲಿಯ ಶ್ರೀನಿವಾಸ ಸ್ಕೂಲ್‍ನಲ್ಲಿ ಬುಧವಾರ ಆಚರಿಸಿದ 73ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಮತ್ತು ಏಕತೆಯನ್ನು ಸಾರುವ ಭಾರತದ ಸಂವಿಧಾನವು...

ಜನಮಾನಸದಲ್ಲಿ ಸದಾ ಸ್ಮರಣೀಯ ಸಚಿವ ಮನಗೂಳಿ: ಪಂಡಿತ ಯಂಪೂರೆ

(28-01-2022ರಂದು ಮಾಜಿ ಸಚಿವರಾದ ದಿವಂಗತ ಶ್ರೀ ಎಮ್.ಸಿ.ಮನಗೂಳಿಯವರ ಪ್ರಥಮ ಪುಣ್ಯಸ್ಮರಣೆಯ ನಿಮಿತ್ತ ಲೇಖನ) ಸಿಂದಗಿ: “ಶಕ್ತಿ ಇದ್ದಾಗ ದುಡಿಯಬೇಕು, ರೊಕ್ಕ ಇದ್ದಾಗ ದಾನ-ಧರ್ಮ ಮಾಡಬೇಕು, ಅಧಿಕಾರ ಇದ್ದಾಗ ಕೆಲಸ ಮಾಡಬೇಕು”. ಎಂದು ಆಗಾಗ ತಮ್ಮ ಭಾಷಣಗಳಲ್ಲಿ ಹೇಳುತ್ತಿದ್ದ ಮಾಜಿ ಸಚಿವ ಆಧುನಿಕ ಭಗೀರಥ, ಸರಳ ಸಜ್ಜನಿಕೆಯ ರಾಜಕಾರಣಿ ದಿವಂಗತ ಎಮ್.ಸಿ. ಮನಗೂಳಿಯವರು ನಮ್ಮನ್ನಗಲಿ ಇಂದಿಗೆ ಒಂದು...

ದೇಶಾಭಿಮಾನ ಉಕ್ಕಿಸಿದ ಲಯನ್ಸ್ ದೇಶಭಕ್ತಿ ಗಾಯನ ಸಂಜೆ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು 73ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶಭಕ್ತಿ ಗಾಯನ ಸಂಜೆ ಕಾರ್ಯಕ್ರಮವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿದರು.ಮುನ್ಯಾಳದ ಆರೂಢ ಜ್ಯೋತಿ ಸುಗಮ ಸಂಗೀತ ಕಲಾ ತಂಡದ ಯುವ ಗಾಯಕರು ದೇಶಭಕ್ತಿ ಹಾಡುಗಳನ್ನು ಹೇಳಿ ಕೇಳುಗರಲ್ಲಿ ದೇಶಾಭಿಮಾನವನ್ನು ಉಕ್ಕಿಸಿದರು.‘ಇದು ಬಾಪೂಜಿ ಬೆಳಗಿದ ಭಾರತ’ ‘ಹಿಂದೂಸ್ತಾನವು ಎಂದೂ ಮರೆಯದ ಭಾರತ ರತ್ನವು ನೀಗಾಗು’ ‘ಜೋಗದ ಸಿರಿ...

ಜನಸಾಮಾನ್ಯರ ಅನುಕೂಲಕ್ಕಾಗಿ ಸೇವಾ ಮನೋಭಾವನೆಯಿಂದ ನಿರ್ಮಿಸಿದ ಸಭಾ ಭವನ: ರಮೇಶ ಜಾರಕಿಹೊಳಿ

ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕರಾದ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಭಾಗಿ ಗೋಕಾಕ: ಜನಸಾಮಾನ್ಯರ ಅನುಕೂಲಕ್ಕಾಗಿ ಅತ್ಯಾಧುನಿಕವಾಗಿ ಗೋಕಾಕ ನಗರದಲ್ಲಿ ಮಹಾಲಕ್ಷ್ಮೀ ಸಭಾ ಭವನ ನಿರ್ಮಿಸಲಾಗಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.ಇಲ್ಲಿಯ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಗುರುವಾರದಂದು 4.50 ಕೋಟಿ ರೂ. ವೆಚ್ಚದಲ್ಲಿ...

ಬೀದರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮೈದುನನ ಕೊಲೆ ಮಾಡಿದ ಮಹಿಳೆ

ಬೀದರ - ಗಂಡ ಸತ್ತ ಆರು ತಿಂಗಳಲ್ಲೆ ಗಂಡನ ಗೆಳೆಯನೊಂದಿಗೆ ಇಟ್ಟಕೊಂಡಿದ್ದ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮೈದುನನನ್ನೆ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪೂರ್ ಗ್ರಾಮದ ಸುನೀಲ್(26) ಕಳೆದ ವಾರ ಔರಾದ್ ತಾಲೂಕಿನ ಕೌಠಾ ಗ್ರಾಮದ ಬಳಿಯ ಮಾಂಜ್ರಾ ನದಿಯ ಸೇತುವೆ ಕೆಳಗೆ ಮೃತವಾಗಿ ಪತ್ತೆಯಾಗಿದ್ದಾನೆ.ವಿಷಯ ತಿಳಿದ ಸಂತಪೂರ್ ಪೊಲೀಸರ...

ಸಂವಿಧಾನ ಗೌರವಿಸುವುದೇ ದೇಶದ ಗೌರವ – ಕಡಾಡಿ

ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ.26 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿಯಲ್ಲಿ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ....
- Advertisement -spot_img

Latest News

ಕವನ : ಬೆಳಕಿನ ಹಬ್ಬ ದೀಪಾವಳಿ

ಬೆಳಕಿನ ಹಬ್ಬ ದೀಪಾವಳಿ ಅಂಧಕಾರದಲಿ ದಿವ್ಯ ಚೇತನದ ಬೆಳಕು ಬೆಳಗಿಸಿ ಮೂಢನಂಬಿಕೆಯಲಿ ಜ್ಞಾನದ ಜ್ಯೋತಿಯ ಹೊತ್ತಿಸಿ ಸುಳ್ಳಿನ ಲೋಕದಲಿ ಸತ್ಯದ ನುಡಿದೀಪ ಹತ್ತಿಸಿ ಬೆಳಕಿನ ಹಬ್ಬ ದೀಪಾವಳಿಯ ಆಚರಿಸಿಸ್ವಾರ್ಥ ಹೃದಯದಿ ನಿಸ್ವಾರ್ಥದ...
- Advertisement -spot_img
error: Content is protected !!
Join WhatsApp Group