Monthly Archives: November, 2022

ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ

ಮೂಡಲಗಿ: ವಿದ್ಯಾರ್ಥಿಗಳು ಮೋಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾರ್ಜನೆ ಕಡೆ ಗಮನಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ...

ನ.28ರಂದು ಪ್ರೋ.ಎಚ್.ಟಿ.ಪೋತೆರವರ ಪ್ರಶಸ್ತಿ ಪುರಸ್ಕೃತ ನಾಲ್ಕು ಕೃತಿಗಳ ಅವಲೋಕನ

ಬೆಂಗಳೂರು - ಸಪ್ನ ಬುಕ್ ಹೌಸ್, ಕನ್ನಡ ಜನಶಕ್ತಿ ಕೇಂದ್ರ ಮತ್ತು ಪ್ರೋ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದೊಡನೆ ಗುಲಬರ್ಗ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೋ.ಎಚ್.ಟಿ.ಪೋತೆರವರ  ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಜಾನಪದ ಅಕಾಡೆಮಿ  ಪ್ರಶಸ್ತಿ ಪುರಸ್ಕೃತ ನಾಲ್ಕು ಕೃತಿಗಳ ಅವಲೋಕನವನ್ನು ನ.28 ಸೋಮವಾರ ಸಂಜೆ 4.15ಕ್ಕೆ ನಗರದ ಚಾಮರಾಜಪೇಟೆಯ  ಕನ್ನಡ...

ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ

ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ...

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ

ಸಿಂದಗಿ: ನಮ್ಮ ಸಂವಿಧಾನದಲ್ಲಿ ಅಡಕವಾಗಿರುವ ತತ್ವಗಳು ವಿಶ್ವದಲ್ಲಿ ಶ್ರೇಷ್ಠವಾಗಿವೆ. ನಾವೂ ಸಹ ಆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಭಾರತದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸೋಣ ಎಂದು ನ್ಯಾಯವಾದಿ ಅನ್ವರ್ ಅಂಗಡಿ ಅವರು ಹೇಳಿದರು. ಪಟ್ಟಣದ ಜೇವರ್ಗಿ ರಸ್ತೆಯಲ್ಲಿರುವ ಲೊಯೋಲ ಶಾಲೆಯಲ್ಲಿ ಸಂವಿಧಾನ ದಿನವನ್ನು ಆಚರಿಸಿ ಮಾತನಾಡಿದರು. ಭಾರತ ಸಂವಿಧಾನವು ವಿಶ್ವದಲ್ಲಿ ಅತ್ಯಂತ ವಿಶಿಷ್ಟವಾದ ಹಾಗೂ ಬೃಹತ್ ಲಿಖಿತ ಸಂವಿಧಾನವಾಗಿದೆ....

ಜಯಶ್ರೀ ಅಬ್ಬಿಗೇರಿಗೆ ಗಡಿನಾಡ ಶಿರೋಮಣಿ ಪ್ರಶಸ್ತಿ

ಬೆಳಗಾವಿ - ಅಥಣಿಯಲ್ಲಿ ನಡೆಯುವ ಗಡಿನಾಡ ಕನ್ನಡ ಸಾಂಸ್ಕೃತಿಕ ಸಂಭ್ರಮದಲ್ಲಿ ಕೊಡ ಮಾಡುವ ಗಡಿನಾಡ ಶಿರೋಮಣಿ ಪ್ರಶಸ್ತಿಯು ಪ್ರಕಟಗೊಂಡಿದ್ದು, ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ ಅಬ್ಬಿಗೇರಿಯವರಿಗೆ ನೀಡಲಾಗಿದೆ. ಜಯಶ್ರೀಯವರ ಅಮೋಘ ಸಾಹಿತ್ಯ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನವಂಬರ್ 27 ರಂದು ಆರ್ ಎಚ್ ಕುಲಕರ್ಣಿ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಸಮಾಜ ವಿಜ್ಞಾನ ಶಿಕ್ಷಕರಾದ ಸುನೀಲ ಭಜಂತ್ರಿ ವಿಧ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ, ವಿಶೇಷತೆ, ಜಾರಿಯಾದ ಇತಿಹಾಸ ಇತ್ಯಾದಿಗಳ ಬಗ್ಗೆ ತಿಳಿಸಿಕೊಟ್ಟರು. ಸಂವಿಧಾನದ ಮೂಲ ಆಶೋತ್ತರಗಳು ಮತ್ತು ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ನಮ್ಮ ಹೆಮ್ಮೆಯ ಸಂವಿಧಾನಕ್ಕೆ ಗೌರವ ಸಲ್ಲಿಸಬೇಕಾಗಿದ್ದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದರು....

ವಿಭಾಗ ಮಟ್ಟದ ಕಬಡ್ಡಿ ಕ್ರೀಡೆಗೆ ಆಯ್ಕೆ: ಕ್ರೀಡಾಪಟುಗಳಿಗೆ ಸತ್ಕಾರ

ಮೂಡಲಗಿ - ಗುಜನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಬೆಳಗಾವಿ ವಿಭಾಗ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗ್ರಾಮಸ್ಥರಿಂದ ಶಾಲೆಯಲ್ಲಿ ಸನ್ಮಾನ ಸಮಾರಂಭ ಜರುಗಿತು. ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಕ್ರೀಡಾಪಟುಗಳನ್ನು ಸತ್ಕರಿಸಿ ಮಾತನಾಡಿ, ವಿಭಾಗದ ಮಟ್ಟದ ಕಬಡ್ಡಿ ಪಂದ್ಯಾವಳಿಯ ವಿಜಯಶಾಲಿಗಳಾಗಿ ಶಾಲೆಯ ಮತ್ತು ಮೂಡಲಗಿ...

ಜೀವ ಸಂಪನ್ಮೂಲಗಳನ್ನು ಉಪಯೋಗಿಸಿ ತನ್ನ ಸೈನ್ಯ ಶಕ್ತಿಯನ್ನು ಹೆಚ್ಚಿಸಿಕೊಂಡ ವಿಜಯನಗರದ ಕೃಷ್ಣದೇವರಾಯ – ಡಾ || ಕೆ ಎಸ್ ಗಣೇಶಯ್ಯ

ಬೆಂಗಳೂರಿನ ಆರ್. ವಿ. ರಸ್ತೆ ಯಲ್ಲಿ ಇರುವ ಪ್ರತಿಷ್ಠಿತ ವಿಜಯ ಕಾಲೇಜಿನಲ್ಲಿ ಆಯೋಜಿಸಿದ್ದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ವಿಜ್ಞಾನ ಸಚಿವಾಲಯದ ಅಂಗ ಸಂಸ್ಥೆಗಳಾದ ಇಂಡಿಯನ್ ಅಕಾಡಮಿ ಆಫ್ ಸೈನ್ಸಸ್ ಬೆಂಗಳೂರು, ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡಮಿ ಹೊಸ ದೆಹಲಿ, ದಿ ನ್ಯಾಷನಲ್ ಅಕಾಡಮಿ ಆಫ್ ಸೈನ್ಸಸ್ ಪ್ರಯಾಗರಾಜ್ ಇವರ ಪ್ರತಿಷ್ಠಿತ...

ಮೂಡಲಗಿ: ಸಾಹಿತಿಗಳ ಮಾಹಿತಿ ಕೋಶ

ಮೂಡಲಗಿ: ಇಲ್ಲಿಯ ಜ್ಞಾನದೀಪ್ತಿ ಪ್ರತಿಷ್ಠಾನದಿಂದ ಮೂಡಲಗಿ ತಾಲ್ಲೂಕು ಸಾಹಿತಿ, ಲೇಖಕರ ಮಾಹಿತಿ ಕೋಶವನ್ನು ಪ್ರಕಟಿಸಲಿದ್ದಾರೆ. ತಾಲ್ಲೂಕಿನಲ್ಲಿರುವ ಸಾಹಿತಿಗಳು, ಲೇಖಕರು ತಮ್ಮ ಪ್ರಕಟಿತ ಕೃತಿಗಳು, ಪ್ರಶಸ್ತಿ, ಜನ್ಮ ದಿನಾಂಕ, ವಿಳಾಸ ಇತ್ಯಾದಿ ಒಳಗೊಂಡ ಮಾಹಿತಿಗಳನ್ನು ಡಿ. 5ರ ಒಳಗಾಗಿ ಜ್ಞಾನದೀಪ್ತಿ ಪ್ರತಿಷ್ಠಾನ, ಶ್ರೀರಂಗ ಹಲ್ಲಿನ ದವಾಖಾನೆ, ಮೂಡಲಗಿ ಕಳಿಸಲು ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿದ್ದಾರೆ. ಅಧಿಕ...

ಕಲ್ಪವೃಕ್ಷ ಕಾಲೇಜಿನಲ್ಲಿ 27ರಂದು ಗುರುವಂದನಾ ಕಾರ್ಯಕ್ರಮ

ಸಿಂದಗಿ: 1983-86 ರ ವಿದ್ಯಾರ್ಥಿ ಬಳಗ ಎಸ್, ಎಸ್, ಹೈಸ್ಕೂಲ್ ಸುಂಗಠಾಣ ಇವರ ಸಹಯೋಗದಲ್ಲಿ ನಿವೃತ್ತ ಶಿಕ್ಷಕರ ಗುರುವಂದನಾ ಹಾಗೂ ಎಸ್.ವ್ಹಿ.ಬಿರಾದಾರ ಇವರ ಷಷ್ಟಿಪೂರ್ತಿ  ಸಮಾರಂಭವನ್ನು ನ. 27 ರಂದು ರವಿವಾರ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ. ಈ  ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು,...
- Advertisement -spot_img

Latest News

ದಲಿತರ ಹಣ ಗ್ಯಾರಂಟಿಗಳಿಗೆ ಬಳಸಿದ ಕಾಂಗ್ರೆಸ್ ; ತನಿಖೆ ಮಾಡಿಸಬೇಕು – ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾದ ಅನುದಾನದ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸಿಕೊಂಡಿದ್ದು, ಅದು ದಲಿತ...
- Advertisement -spot_img
close
error: Content is protected !!
Join WhatsApp Group