Monthly Archives: October, 2024

ಶ್ರೇಷ್ಠ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ 

ಮೂಡಲಗಿ - ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಡಿಸೆಂಬರ್ 21 ರಿಂದ 23 ರ ವರೆಗೆ ನಡೆಯುವ  “ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು  ಹಮ್ಮಿಕೊಳ್ಳಲಾಗಿದ್ದು ಈ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಶಿಷ್ಟ ಕೃಷಿಕರಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ...

ಅ.೨೦ರಂದು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ಸಾಧಕೋತ್ತಮರಿಗೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ

ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.೨೦ರಂದು ಸಂಜೆ ೬.೦೦ಗಂಟೆಗೆ ವಿಶ್ವ ಮಧ್ವಮತ ವೆಲ್‌ಫೇರ್ ಅಸೋಸಿಯೇಷನ್ ಆಯೋಜಿಸಿದೆ.ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂಕರ‍್ಯ ಮಾಡುತ್ತಿರುವ...

ಮಹರ್ಷಿ ವಾಲ್ಮೀಕಿಯ ಸಂದೇಶ ಮಾನವಿಯತೆಯ ಸಂದೇಶವಾಗಿದೆ

ಸಿಂದಗಿ; ವಾಲ್ಮಿಕಿಯವರು ಇಡೀ ಮನುಕುಲಕ್ಕೆ ರಾಮಾಯಣ ಎಂಬ ಮಹಾಕಾವ್ಯದ ಮೂಲಕ ಬಹುದೊಡ್ಡ ಸಂದೇಶ ನೀಡಿದ್ದಾರೆ. ಅವರು ಸಾರಿದ ಬದುಕಿನ ಮೌಲ್ಯಗಳು ಎಂದಿಗೂ ಅಗತ್ಯ ಎಂದು ನಿವೃತ್ತ ಪ್ರಾಚಾರ್ಯ ಆಯ್.ಬಿ. ಬಿರಾದಾರವರು ಹೇಳಿದರು.ಸ್ಥಳೀಯ ಪಿ.ಇ.ಎಸ್. ಪ.ಪೂ. ಕಾಲೇಜಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಲಾಯನ್ ಕೆ.ಎಚ್. ಸೋಮಾಪೂರ,...

ಢಣ ಢಣ ಕಾಂಚಾಣ ವೆಬ್ ಸಿರೀಸ್ ಬಿಡುಗಡೆ

ಸಿಂದಗಿ: ಸೈಬರ್ ವಂಚನೆಯ ಕಥಾ ಹಂದರವನ್ನು ಹೆಣೆದು ಢಣ ಢಣ ಕಾಂಚಾಣ  ವೆಬ್ ಸೀರಿಸ್ ರಚಿಸಿದ್ದಾರೆ. ಬಹುತೇಕ ವಿಜಯಪುರ ಜಿಲ್ಲೆ ಹಾಗೂ ಗ್ರಾಮೀಣ ಭಾಗದಲ್ಲಿ ಶೂಟಿಂಗ್ ಮಾಡಲಾಗಿದ್ದು. ಇಡೀ ವೆಬ್ ಸೀರಿಸ್ ಉತ್ತರ ಕರ್ನಾಟಕ ಭಾಷೆಯನ್ನು ಒಳಗೊಂಡಿದೆ. ಉತ್ತರ ಕರ್ನಾಟಕದ ಕಲಾವಿದರ ನಟನೆಯನ್ನು ಉತ್ತರ ಕರ್ನಾಟಕದ ಸೊಗಡಿನಲ್ಲಿಯೇ ನೋಡಬಹುದಾಗಿದೆ ಎಂದು ನಿರ್ಮಾಪಕ ಗುರುರಾಜ ಮಠ...

ತತ್ವಬೋಧನೆಗೆ ಮಠಗಳು ಸಿದ್ಧವಾಗಬೇಕು – ಬಿಇಓ ಯಡ್ರಾಮಿ

ಸಿಂದಗಿ: ಆರ್ಥಿಕ ಸಬಲತೆಯ ಮಠಗಳಾಗದೇ ತತ್ವಭೋಧನೆಗೆ ಮಠಗಳು ಸಿದ್ಧವಾಗಬೇಕು. ಶಾಲೆಗಳಲ್ಲಿ ಶಿಸ್ತು ಮತ್ತು ಶಿಕ್ಷಣ ಕಲಿಯಬಹುದು ಮಠಗಳಿಂದ ಆಧ್ಯಾತ್ಮಿಕತೆ ಮತ್ತು ಸಂಸ್ಕಾರ ಸಿಗುವುದು ಅಲ್ಲದೆ ವಿದೇಶಗಳಲ್ಲಿ ಬುದ್ಧಿಗೆ ಮಹತ್ವ ನೀಡಿದರೆ, ನಮ್ಮ ಭಾರತದಲ್ಲಿ ಹೃದಯವಂತಿಕೆಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಇದು ನಮ್ಮ ದೇಶದ ಸಂಸ್ಕೃತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದರು.ತಾಲೂಕಿನ ಹಿಕ್ಕನಗುತ್ತಿ...

ವಾಲ್ಮೀಕಿ ಒಂದು ಹೆಸರಾಗದೆ ಶಕ್ತಿಯಾಗಿದೆ – ಶಶಿಧರ ಅವಟಿ

ಸಿಂದಗಿ; ಬದಲಾವಣೆ ಜಗದ ನಿಯಮ ಅನ್ನುವಂತೆ ಒಬ್ಬ ಬೇಡ ಕುಲದಲ್ಲಿ ಜನಿಸಿದ ರತ್ನಾಕರ ಬೇಟೆಗಾರರಾಗಿ, ದರೋಡೆಕೊರರಾಗಿದ್ದ ವಾಲ್ಮಿಕಿಯವರು ನಾರದ ಮುನಿಗಳ ಮಾತಿಗೆ ಕಟ್ಟುಬಿದ್ದು ೧೨ ವರ್ಷ ರಾಮ ನಾಮ ಜಪಿಸಿ ರಾಮಾಯಣ ಕೃತಿಗೆ ಕಾರಣಿಕರ್ತರಾಗಿ ಇಡೀ ಜಗತ್ತಿಗೆ ರಾಮ, ಸೀತೆಯರ ಪರಿಚಯವನ್ನು ತಿಳಿಸಿಕೊಟ್ಟಿದ್ದಾರೆ ಅದಕ್ಕೆ ನಾವೆಲ್ಲ ಗ್ರಂಥವನ್ನು ಪೂಜಿಸುತ್ತಿದ್ದೇವೆ ಎಂದು ಆರ್.ಡಿ.ಪಿಯು ಕಾಲೇಜಿನ ಉಪನ್ಯಾಸ...

ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನ ನೀಡಿದ ಆದಿಕವಿ ಮಹರ್ಷಿ ವಾಲ್ಮೀಕಿ : ಡಾ. ಸುರೇಶ ಹನಗಂಡಿ

ಮೂಡಲಗಿ: ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವ ಮತ್ತು ಕಾವ್ಯದ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷವು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿಯವರು ನೂರಾರು...

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳುಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ ತುಂಬ ತಾನೆ ನಿಂದಳು ತುಳುಕಾಡುತಬಂಗಾರದ ಆಭರಣ‌ವ ಮೈಯ್ಯತುಂಬ ತೊಟ್ಟಳು ಇಲಕಲ್ಲಿನ ಕೈಮಗ್ಗದ ಭಾರಿಸೀರೆ ಉಟ್ಟಳು ಬಿಳಿಬಣ್ಣದ ಪರಿಮಳ ಪುಡಿ ಬಳಿದಳು ಚೆಲುವದನಕೆ ದಟ್ಟವಾದ ಕೆಂಬಣ್ಣವ ಲೇಪಿಸಿದಳು ಅಧರಕೆಸಿಂಗರಿಸಿದ ಮೈಸೂರಿನ ಮದದಾನೆಯ ತೆರದಲಿ ಬೈಗು ವಾಯು ವಿಹಾರಕ್ಕೆ ಹೊರಹೊರಟಳು ಜವದಲಿ ದಪ್ಪ‌ಮೈಯ್ಯ ಬಳುಕಿಸುತ್ತ ಮಂದಗಮನಿ ನಡೆದಳು ಸೊಂಡಿಲಗೈ ತಿರುಗಿಸುತ್ತ ಸಾವಕಾಶ...

ಸುಯೇಜ್ ಕಾಲುವೆ ಕುರಿತ ವಿಷಯ ಮಂಡನೆಯಲ್ಲಿ ತೇಜಸ್ವಿನಿ ದ್ವಿತೀಯ ಸ್ಥಾನ

ಇತ್ತೀಚೆಗೆ ಹರಿಯಾಣಾದಲ್ಲಿ ಸುಯೇಜ ಕಾಲುವೆ ಸಂಪರ್ಕ ಕಲ್ಪಿಸುವ ದೇಶಗಳಲ್ಲಿ ರಸ್ತೆ ಮೂಲಕ ವ್ಯಾಪಾರ ವಹಿವಾಟು ನಡೆಸಿದರೆ ಆಗುವ ಅನುಕೂಲ ಹಾಗೂ ಅನಾನುಕೂಲ ವಿಷಯ ಕುರಿತು ವಿಷಯ ಮಂಡಿಸಲು ಹೇಳಿದಾಗ ವಿಷಯ ಮಂಡಿಸಿದ ಹುಬ್ಬಳ್ಳಿ ಮೂಲದ ತೇಜಸ್ವಿನಿ ಮಹಾಂತೇಶ ಶಿರಹಟ್ಟಿ ದ್ವಿತೀಯ ಗೌರವಕ್ಕೆ ಪಾತ್ರಳಾಗಿರುವಳುಸದ್ಯ ಹುಬ್ಬಳ್ಳಿಯಲ್ಲಿ ನೆಲೆಸಿರುವ ಮಹಾಂತೇಶ ಅವರು ಮುರಗೋಡ ಸಮೀಪದ ಹಿರೇಕೊಪ್ಪದವರು. ಅವರ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

 ನಾಲ್ಕು ಗೋಡೆಯ ಬಿಟ್ಟು ಕೋಣೆಯಿಂದಿತ್ತ ಬಾ ತಂಗಾಳಿ ಬೀಸುತಿದೆ ಬಯಲಿನಲ್ಲಿ ಎಲ್ಲಕಡೆ ಸಮನಾಗಿ ಸೂಸುತಿದೆ ಶಶಿಕಿರಣ ಮೇಲುಕೀಳುಗಳಿಲ್ಲ - ಎಮ್ಮೆತಮ್ಮಶಬ್ಧಾರ್ಥ ಶಶಿಕಿರಣ = ಬೆಳದಿಂಗಳುತಾತ್ಪರ್ಯ ಸಮಾಜದಲ್ಲಿಯ ಜಾತಿ,ಮತ, ವರ್ಗ,ವರ್ಣವೆಂಬ‌ ನಾಲ್ಕು ಗೋಡೆಯಿಂದಾದ ಸಂಕುಚಿತ ಭಾವನೆಯ ಕೋಣೆಯಿಂದ ಹೊರಗೆಬಂದುಬಿಡು. ಸಂತೋಷವಾದ ಸ್ವಾತಂತ್ರದ ತಂಪು ಗಾಳಿ‌ ಬಯಲಿನಲ್ಲಿ‌ ಬೀಸುತ್ತಿದೆ. ಕತ್ತಲೆಯ ಕೋಣೆಯಲ್ಲಿ ಕೂಡುವುದಕಿಂತ ಹೊರಗಡೆ ಎಲ್ಲರಿಗೆ ಸಮನಾಗಿ ಸೂಸುವ ಚಂದ್ರನ ಬೆಳದಿಂಗಳಲ್ಲಿ ಕೂತು‌ ಆನಂದ‌ ಅನುಭವಿಸು. ತಂಗಾಳಿ ಮತ್ತು ಬೆಳದಿಂಗಳು...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group