ಸಿದ್ದರಾಮೋತ್ಸವಕ್ಕೆ ಬೀದರನಿಂದ 25 ಸಾವಿರ ಜನ

Must Read

ಬೀದರ – ಬುಧವಾರ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಬೀದರ್ ನಿಂದ 20-25 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಹೇಳಿದ್ದಾರೆ.

ಸಿದ್ದರಾಮೋತ್ವವದಲ್ಲಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದು ಪ್ರತಿಯೊಂದು ರಾಜ್ಯದ ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಹಾಗು ಮಾಜಿ ಮುಖ್ಯಮಂತ್ರಿಗಳು ಕೂಡ ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದರು.

ದಾವಣಗೆರೆಯ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಬೀದರ್‌ ನಿಂದ ಪ್ರತ್ಯೇಕ ರೈಲಿನಲ್ಲಿ 4 ರಿಂದ 5 ಸಾವಿರ ಸಿದ್ದು ಅಭಿಮಾನಿಗಳು, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣದಿಂದ ತಲಾ 10 ರಿಂದ 15 ಗಾಡಿಯಲ್ಲಿ ಸಾವಿರಾರು ಅಭಿಮಾನಿಗಳು ಪ್ರಯಾಣ ಮಾಡಲಿದ್ದಾರೆ ಎಂದು ಅವರು ಕಿಕ್ಕಿರಿದ ಜನಜಂಗುಳಿಯಲ್ಲಿ ಪ್ರಕಟಿಸಿದರು.

ಈ ವೇಳೆ ಬಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಭಿಮಾನಿಗಳು ಮುಗಿಲುಮುಟ್ಟುವಂತೆ ಘೋಷಣೆ ಕೂಗಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...

More Articles Like This

error: Content is protected !!
Join WhatsApp Group