spot_img
spot_img

ವಿಹಿಂಪ, ಭಜರಂಗ ದಳ ಕಾರ್ಯ ಶ್ಲಾಘನೀಯ- ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಧ್ಯೇಯ ವ್ಯಾಖ್ಯೆವಾಗಿರುವಂತಹ ಸಂಘಟನೆ, ಸುರಕ್ಷೆ, ಸಂಸ್ಕಾರ, ಈ ಮೂರು ಕಾರ್ಯಗಳ ಜಾರಿಗಾಗಿ ಪಣ ತೊಟ್ಟಿರುವ ಭಜರಂಗದಳದ ಯುವ ಕಾರ್ಯಕರ್ತರ ಶ್ರಮ ಶ್ಲಾಘನೀಯವಾದದ್ದು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು.

ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಡಿ. 27 ರಂದು ಶ್ರೀ ಮಾರುತಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಹನುಮ ಮಾಲಾಧಾರಿಗಳು ಮಾಲೆಗಳನ್ನು ವಿಸರ್ಜಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮಾಜದ ಸಂಘಟನೆಯೊಂದಿಗೆ ಹಿಂದೂ ಸಮಾಜದ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಯುವುದು ಇಂದಿನ ಅಗತ್ಯವಾಗಿದ್ದು, ಪ್ರೀತಿಯ ಹೆಸರಿನಲ್ಲಿ ಮತಾಂತರದ ಷಡ್ಯಂತರ ಮಾಡುತ್ತಿರುವ ಲವ್ ಜಿಹಾದ್‍ನಂತಹ ಸಮಾಜ ವಿದ್ರೋಹಿ ಚಟುವಟಿಕೆಗಳನ್ನು ಸಂಘಟಿತವಾಗಿ ಎದುರಿಸಬೇಕಾಗಿದೆ.

ಗೋಹತ್ಯೆ ನಿಷೇಧ ಕಾನೂನು ಜಾರಿಯಾದರು ಕೂಡ ಕಳ್ಳ ಮಾರ್ಗದಲ್ಲಿ ನಡೆಯಬಹುದಾದ ಗೋಹತ್ಯೆಯನ್ನು ತಡೆಯುವ ಮೂಲಕ ಗೋ ಮಾತೆಯನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

- Advertisement -

ಸಮಾಜ ಬಂಧುಗಳಿಗೆ ರಕ್ಷಣೆ ಒದಗಿಸುವುದರ ಜೊತೆಗೆ ಅನಿಷ್ಠ ಪದ್ಧತಿಗಳಿಗೆ ಬಲಿಯಾಗುವ ಹಿಂದೂ ಬಾಂಧವರ ಕುಟುಂಬಕ್ಕೆ ಸಂಸ್ಕಾರ ನೀಡುವುದರ ಮುಖಾಂತರ ಭಜರಂಗದಳದ ಧ್ಯೇಯವಾಗಿರುವ ಸಂಘಟನೆ, ಸುರಕ್ಷೆ, ಸಂಸ್ಕಾರ ಈ ಎಲ್ಲವನ್ನು ಜಾರಿಗೊಳಿಸುವ ಸಂಕಲ್ಪವನ್ನು ಹನುಮ ಮಾಲಾಧಾರಿಗಳು ಮಾಡಬೇಕೆಂದು ಕರೆ ನೀಡಿದರು.

ಕೋಟ್ಯಾನು ಕೋಟಿ ಹಿಂದೂಗಳ ಸಂಕಲ್ಪಗಳಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ದೇಶದ ಆತ್ಮಗೌರವದ ಸಂಕೇತವಾಗಿದೆ, ಭವ್ಯ ಶ್ರೀರಾಮ ಮಂದಿರವನ್ನು ಹಿಂದೂ ಭಾಂದವರೆಲ್ಲ ಕೂಡಿಕೊಂಡು ನಿರ್ಮಿಸುವ ಮೂಲಕ ನಮ್ಮ ಮೇಲೆ ನಡೆದ ಮತಾಂಧ ಆಕ್ರಮಣಗಳ ಕುರುಹುಗಳನ್ನು ಅಳಿಸಿ ಹಾಕಿ, ಹಿಂದೂ ಸಮಾಜ ಜಾಗೃತಗೊಂಡು ಒಗ್ಗಟಿನಿಂದ ರಾಮರಾಜ್ಯ ನಿರ್ಮಿಸುವ ಸಂಕಲ್ಪ ಪೂರ್ಣಗೊಳಿಸಬೇಕಾಗಿದೆ ಎಂದರು. ವಿಶ್ವ ಹಿಂದೂ ಪರಿಷತ್, ಆರ್.ಎಸ್.ಎಸ್ ನೇತೃತ್ವದಲ್ಲಿ ನಡೆಯುತ್ತಿರುವ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಹಿಂದೂ ಸಮಾಜ ಸಹಾಯ ಸಹಕಾರ ನೀಡಬೇಕೆಂದು ವಿನಂತಿಸಿದರು.

- Advertisement -

ಗೋಕಾಕದ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಾರಾಯಣ ಮಠಾಧಿಕಾರಿ, ಭಜರಂಗದಳದ ಪ್ರಮುಖರಾದ ಸದಾಶಿವ ಗುದಗಗೋಳ, ಲಕ್ಷ್ಮಣ ಮಿಸಾಳೆ, ಅಮಿಶ ಕಾಳೆ, ಶಿವು ಗೋಟುರ, ಸಿದ್ದಪ್ಪ ತಿಗಡಿ, ಪುರಷೋತ್ತಮ ವಡ್ಡರ, ಸಹದೇವ ಖಾನಾಪೂರ, ಬಸವಂತ ದಾಸನಾಳ, ಬಸವರಾಜ ಕಡಾಡಿ, ಶೀತಲ ಅಥಣಿ, ಚಂದ್ರಶೇಖರ ಮದಗನ್ನವರ, ಗುರುನಾಥ ಮಧಬಾಂವಿ, ಸಿದ್ದು ಬಡಿಗೇರ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group