ಬೆಂಗಳೂರು – ರಾಜ್ಯದ ಆರು ಜಿಲ್ಲೆಗಳಿಗೆ ಹೊಸ ಉಸ್ತುವಾರಿ ಸಚಿವರ ನೇಮಕ ಮಾಡಿ ಸರ್ಕಾರದ ಅಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ರಮೇಶ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನೇಮಿಸಲಾಗಿದೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಉಮೇಶ ಕತ್ತಿ, ಬೀದರ ಜಿಲ್ಲೆಗೆ ಅರವಿಂದ ಲಿಂಬಾವಳಿ, ಕೋಲಾರ ಜಿಲ್ಲೆಗೆ ಎಂ ಟಿ ಬಿ ನಾಗರಾಜ್, ಕಲಬುರ್ಗಿ ಜಿಲ್ಲೆಗೆ ಮುರುಗೇಶ ನಿರಾಣಿ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಸ್ ಅಂಗಾರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಅಧೀನ ಕಾರ್ಯದರ್ಶಿಮಾಲತಿ ಎಸ್. ಅವರು ಆದೇಶ ಹೊರಡಿಸಿದ್ದಾರೆ.