ಸಿಂದಗಿ: ಮತಕ್ಷೇತ್ರ್ರದಲ್ಲಿ ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ 7 ರಂದು ಸಿಂದಗಿ ನಗರದಲ್ಲಿ ಬೆಳಿಗ್ಗೆ 10:30 ಗಂಟೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನನಿತ್ಯ ಏರಿಸುತ್ತಿರುವುದರಿಂದ ಜನಸಾಮಾನ್ಯರಿಗೆ ತುಂಬಾ ಹೊರೆಯಾಗುತ್ತಿದ್ದು ತೈಲ ಬೆಲೆ ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಂದಗಿಯಲ್ಲಿ ಸೈಕಲ್ ಜಾಥಾ ರ್ಯಾಲಿಯನ್ನು ಕೆಪಿಸಿಸಿ ಆದೇಶದಂತೆ ಹಮ್ಮಿಕೊಳ್ಳಲಾಗಿದೆ.
ಆದಕಾರಣ ಈ ಕಾರ್ಯಕ್ರಮವನ್ನು ಸಿಂದಗಿ ಮತಕ್ಷೇತ್ರದ ಎಲ್ಲ ಕಾಂಗ್ರೆಸ್ ಮುಖಂಡರು ಹಾಗೂ ಅಂಗ ಘಟಕಗಳ ಪದಾಧಿಕಾರಿಗಳು ಮತ್ತು ಹಾಲಿ ಮತ್ತು ಮಾಜಿ ಚುನಾಯಿತ ಜನಪ್ರತಿನಿಧಿಗಳು ತಪ್ಪದೆ ಭಾಗವಹಿಸಬೇಕು ಎಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳೂರ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.