ಶಿವಲಿಂಗ ಟಿರಕಿಯವರಿಗೆ ಸತ್ಕಾರ

Must Read

ಮೂಡಲಗಿ – ಬಡ ನೇಕಾರರು ಸಾಲ ಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಸರ್ಕಾರ ನೇಕಾರರ ನೆರವಿಗೆ ಬರಬೇಕು. ನೇಕಾರರಿಗಾಗಿ ವಿಶೇಷ ಪ್ಯಾಕೇಜ್, ವಿಮಾ ಯೋಜನೆ, ಮಾಸಾಶನಗಳನ್ನು ಮಂಜೂರು ಮಾಡಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು.

ಮೂಡಲಗಿ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಶ್ರೀ ನೀಲಕಂಠಮಠದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.‌ನೇಕಾರರ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ನಾವು ಎಲ್ಲಾ ಕಡೆಗೆ ಮನವಿಗಳನ್ನು ನೀಡುತ್ತಿದ್ದೇವೆ ಎಂದು ಅವರು ಹೇಳಿದರು.

ನೀಲಕಂಠ ಮಠದ ಶ್ರೀ ಶಿವಾನಂದ ಸ್ವಾಮೀಜಿಯವರು ಟಿರಕಿಯವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಈಶ್ವರ ಮುರಗೋಡ, ಸೋಮು ಮರೇಗುದ್ದಿ, ಬಿಜೆಪಿ ನೇಕಾರ ಪ್ರಕೋಷ್ಠ ಸಂಚಾಲಕ ಮಹಾಲಿಂಗ ಒಂಟಗೋಡಿ, ಕುಮಾರ ಗಿರಡ್ಡಿ, ಮಡಿವಾಳ ಜಿಡ್ಡಿ, ಬಿಜೆಪಿ ಮುಖಂಡ ಪ್ರಕಾಶ ಮಾದರ, ಶ್ರೀಶೈಲ ಖಾನಾಪೂರ ಇತರರು ಇದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group