ಉಗ್ರರೊಂದಿಗೆ ಕಾಳಗ ; ಯೋಧ ಹುತಾತ್ಮ

Must Read

ಬೀದರ – ಪಂಜಾಬ್ ನ ಫಜಲಿಕಾ ದಲ್ಲಿ ನಡೆದ ಉಗ್ರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಔರಾದ್ ತಾಲೂಕಿನ ಬೇಲೂರು ಗ್ರಾಮದ ಬಸವರಾಜ ಹುತಾತ್ಮರಾಗಿದ್ದಾರೆ.

ಸುದ್ದಿ ತಿಳಿಯುತ್ತಲೇ ಬಸವರಾಜ್ ಮನೆಯಲ್ಲಿ ಶೋಕ ಮಡುಗಟ್ಟಿದ್ದು ಬಸವರಾಜ್ ಪಾರ್ಥಿವ ಶರೀರಕ್ಕಾಗಿ ಕುಟುಂಬ ಕಾಯುತ್ತಿದೆ.ಆದರೆ ಪ್ರಕರಣ ನಡೆದು ೧೨ ಗಂಟೆಯಾದರೂ ಜಿಲ್ಲಾಡಳಿತಕ್ಕೆ ಮಾಹಿತಿ ಸಿಕ್ಕಿಲ್ಲ.

ಇತ್ತ ಸಂಸದ ಭಗವಂತ್ ಖೂಬಾ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕ ಖುಷಿಯಲ್ಲಿದ್ದರೆ ಅತ್ತ ಇಡೀ ಬೀದರ ಜಿಲ್ಲೆಯೇ ಯೋಧನೊಬ್ಬನನ್ನು ಕಳೆದುಕೊಂಡು ಮಂಕಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಅವರು ಸಹ ಬಸವರಾಜ್ ನಿಧನಕ್ಕೆ ಸರಿಯಾದ ಸ್ಪಂದನೆ ನೀಡಿಲ್ಲವಾದ್ದರಿಂದ ಔರಾದ ತಾಲ್ಲೂಕಿನ ಜನರು ಜಿಲ್ಲಾ ಉಸ್ತುವಾರಿ ಮತ್ತು ನೂತನ ಕೇಂದ್ರ ಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group