ಆಲೂರು ಗ್ರಾಮದ ಯೋಧ ಬಸವರಾಜ್ ಆತ್ಮಹತ್ಯೆ

Must Read

ಇಂಡೋ ಪಾಕ್ ಗಡಿಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕದ ಬಸವರಾಜ್ ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.ಪಂಜಾಬ್ ನ ಫೈಜಲಿಕದಲ್ಲಿ ಈ ಘಟನೆ ನಡೆದಿದೆ.

ನಿನ್ನೆ ಅವರು ಉಗ್ರರೊಂದಿಗೆ ಸೆಣಸಾಟದಲ್ಲಿ ಹುತಾತ್ಮರಾಗಿದ್ದಾರೆಂಬುದಾಗಿ ವರದಿಯಾಗಿತ್ತು. ಆದರೆ ಘಟನೆಯನ್ನು ಅಲ್ಲಗಳೆದಿರುವ ಸೈನ್ಯದ ಅಧಿಕಾರಿಗಳು, ಬಸವರಾಜ್ ಅವರು ಕೌಟುಂಬಿಕ ಕಾರಣಗಳಿಂದಾಗಿ ತಮಗೆ ಪೂರೈಸಲಾಗಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಧಿಕೃತ ಮಾಹಿತಿಯನ್ನು ಡೆಪ್ಯೂಟಿ ಕಮಾಂಡೆಂಟ್ ಬಹಿರಂಗ ಪಡಿಸಿದ್ದಾರೆ.

ಇಂದು ಹೈದ್ರಾಬಾದ್ ಮೂಲಕ ಔರಾದ್ ತಾಲೂಕಿನ ಆಲೂರು ಗ್ರಾಮಕ್ಕೆ ಆಗಮಿಸಲಿರುವ ಪಾರ್ಥಿವ ಶರೀರ. ಇಂದು ಸಂಜೆ ಸ್ವ ಗ್ರಾಮ ಆಲೂರಿನ ಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಬಸವರಾಜ್ ಅವರ ಅಂತ್ಯಕ್ರಿಯೆ ನೆರವೇರಲಿದೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group