ಸಿಡಿಲು ಬಡಿದು ರೈತ ಮಹಿಳೆ ಮತ್ತು ಮಗು ಸಾವು

Must Read

ಬೀದರ: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖುದಾವಂದಪೂರ ಗ್ರಾಮದ ರೈತ ಮಹಿಳೆ ತನ್ನ ಮಗಳೊಂದಿಗೆ ಹೊಲದಿಂದ ಮನೆಗೆ ತೆರಳುವಾಗ ಸಿಡಿಲು ಬಡಿದು ಸಾವನ್ನಪ್ಪಿದ ದಾರುಣ ಘಟನೆ ರವಿವಾರ ಸಂಜೆ ಸಂಭವಿಸಿದೆ.

ಭಾಗ್ಯಶ್ರೀ ಗಂಡ ಭೀಮರಾವ ಮೇತ್ರೆ (32) ಮತ್ತು ಮಗು ವೈಶಾಲಿ ಮೇತ್ರೆ (9) ಮೃತಪಟ್ಟವರು. ಮಧ್ಯಾನ್ಹದಿಂದ ಸತತವಾಗಿ ಸುರಿಯುತ್ತಿರುವ ಮಳೆಯಲ್ಲಿ ಹೊಲದಲ್ಲಿಯೇ ಕಾಲ ಕಳೆದ ಮಹಿಳೆ ಮತ್ತು ಅವಳ ಮಗಳು ಸ್ವಲ್ಪ ಮಳೆ ನಿಂತ ಮೇಲೆ ಮನೆಗೆ ಹೋಗುವ ಸಂದರ್ಭದಲ್ಲಿ ಹೊಲದಲ್ಲಿಯೇ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ತಾಲೂಕು ದಂಡಾಧಿಕಾರಿ ಕಛೇರಿಯಿಂದ ಕಂದಾಯ ನಿರೀಕ್ಷಕರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದರು. ಈ ಕುರಿತು ಮೆಹಕರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group