ಬೀದರ್ ನಲ್ಲಿ ಮೂರು ಕಡೆ ಎಸಿಬಿ ದಾಳಿ…

Must Read

ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ಬೆಳಂಬೆಳಗ್ಗೆ ಎಸಿಬಿ ಪೊಲೀಸರಿಂದ ಏಕ‌ ಕಾಲದಲ್ಲಿ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಶಿವಾಜಿ ನಗರದ ನಿವಾಸ ಪ್ರದೇಶಗಳನ್ನು, ಭಾಲ್ಕಿ ತಾಲೂಕಿನ ಮೇಹಕರ್ ನ ನಿವಾಸ ಹಾಗೂ ಮೇಹಕರ್ ಗ್ರಾಮದ ಪೆಟ್ರೋಲ್ ಪಂಪ್ ಸೇರಿದಂತೆ ಏಕ ಕಾಲಕ್ಕೆ ಮೂರು ಕಡೆ ಎಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಜಿಲ್ಲಾ ಪಂಚಾಯತ್ ಬಸವಕಲ್ಯಾಣ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್ ಮೋರೆ ನಿವಾಸದ ಮೇಲೆ ದಾಳಿಯಾಗಿದೆ.

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬೀದರ್ ಎಸಿಬಿ ಪೊಲೀಸರು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ… ಎಸಿಬಿ ಎಸ್ಪಿ ಮಹೇಶ್ ಮಘಣ್ಣನವರ್ ಮಾರ್ಗದರ್ಶನದಲ್ಲಿ ಈ ದಾಳಿ ಮಾಡಲಾಗಿದೆ.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group