Homeಸುದ್ದಿಗಳುಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಬೀದರ – ಗಡಿ ಜಿಲ್ಲೆ ಬೀದರ್ ನ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುನಾಥ ಅಣ್ಣೆಪ್ಪ ಗಾಮಾ (52) ಮೃತ ರೈತ.

ಇವರು ಕೃಷಿ ಚಟುವಟಿಕೆಗಳಿಗಾಗಿ ಎಸ್.ಬಿ.ಐ ಬ್ಯಾಂಕ್ ನಲ್ಲಿ ರೂ 3 ಲಕ್ಷ, ಕೆಜಿಬಿ ಬ್ಯಾಂಕ್ ನಲ್ಲಿ ರೂ 1.20 ಲಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಲ್ಲಿ ರೂ 1 ಲಕ್ಷ ಸೇರಿದಂತೆ ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲ ಪಡೆದಿದ್ದರು.

ಅದನ್ನು ತೀರಿಸುವ ಕುರಿತು ಯೋಚನೆ ಮಾಡುತ್ತಿದ್ದರು. ಇದರಿಂದ ಜಿಗುಪ್ಸೆಗೊಂಡು ತಮ್ಮ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪತ್ನಿ ಭಾಲ್ಕಿ ಗ್ರಾಮೀಣ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group