Homeಸುದ್ದಿಗಳುಬೊಮ್ಮಾಯಿ ಮುಖ್ಯಮಂತ್ರಿ ; ಕಡಾಡಿ ಹರ್ಷ

ಬೊಮ್ಮಾಯಿ ಮುಖ್ಯಮಂತ್ರಿ ; ಕಡಾಡಿ ಹರ್ಷ

ಮೂಡಲಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಜುಲೈ 28 ರಂದು ಪ್ರಮಾಣ ವಚನ ಸ್ವೀಕರಿಸಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಸಂಸದ ಈರಣ್ಣ ಕಡಾಡಿ ಹರ್ಷವ್ಯಕ್ತಪಡಿಸಿದ್ದಾರೆ.

ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಬೊಮ್ಮಾಯಿ ಅವರು ಅತ್ಯುತ್ತಮ ಆಡಳಿತ ನೀಡುವ ಅನುಭವ ಹೊಂದಿದ್ದಾರೆ ಎಲ್ಲರನ್ನೂ ಒಂದಾಗಿ ಕೊಡೊಯ್ಯುವ ಸಾಮರ್ಥ್ಯ ಹೊಂದಿರುವ ಅವರಿಗೆ ಹಲವಾರು ಇಲಾಖೆಗಳ ಸಚಿವರಾಗಿ ಕೆಲಸ ಮಾಡಿರುವ ಅನುಭವ ಇರುತ್ತದೆ.

ರಾಜ್ಯ ನೂತನ ಮುಖ್ಯಮಂತ್ರಿಯಾಗಿರುವುದರಿಂದ ಉತ್ತರ ಕರ್ನಾಟಕ ಭಾಗದ ಹಲವಾರು ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಉತ್ತರ ಕರ್ನಾಟಕಕ್ಕೆ ಬಹಳ ವರ್ಷದ ನಂತರ ಮುಖ್ಯಮಂತ್ರಿ ಹುದ್ಧೆ ದೊರೆತಿದ್ದು ನಮ್ಮೆಲ್ಲರಿಗೂ ಹರ್ಷ ತಂದಿದೆ ಎಂದರು.

RELATED ARTICLES

Most Popular

error: Content is protected !!
Join WhatsApp Group