Homeಸುದ್ದಿಗಳುಶಶಿಕಲಾ ಜೊಲ್ಲೆಯನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

ಶಶಿಕಲಾ ಜೊಲ್ಲೆಯನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು– ಮೊಟ್ಟೆ ಹಗರಣದಲ್ಲಿ ಸಿಲುಕಿದ ಆರೋಪ ಹೊತ್ತಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತ ರು ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು.

ಭ್ರಷ್ಟಾಚಾರ ಆರೋಪ ಹೊತ್ತವರನ್ನು ಸಂಪುಟದಲ್ಲಿ ಸೇರಿಸಿಕೊಂಡಿರುವ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಚಿವೆ ಜೊಲ್ಲೆಯವರ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಮಧ್ಯೆ ಗೋಕಾಕದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಶಶಿಕಲಾ ಜೊಲ್ಲೆಯವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group