Homeಸುದ್ದಿಗಳುಕೋವಿಡ್ ನಿಯಂತ್ರಣ ಮಾಡುವುದರಲ್ಲಿ ರಾಜ್ಯ ಸರ್ಕಾರ ವಿಫಲ - ಎಸ್ ಆರ್ ಪಾಟೀಲ್

ಕೋವಿಡ್ ನಿಯಂತ್ರಣ ಮಾಡುವುದರಲ್ಲಿ ರಾಜ್ಯ ಸರ್ಕಾರ ವಿಫಲ – ಎಸ್ ಆರ್ ಪಾಟೀಲ್

ಬೀದರ – ಕೋವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.

ಬೀದರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಕುರ್ಚಿಗಾಗಿ ಸ್ವಪಕ್ಷೀಯರ ಮಧ್ಯದಲ್ಲೇ ಕಚ್ಚಾಟದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಾಲಹರಣ ಮಾಡುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಆರೋಪ ಮಾಡಿದರು.

ಜಿಲ್ಲೆಯ ಹುಮನಾಬಾದ ಪಟ್ಟಣಕ್ಕೆ ಗುರುವಾರ ಆಗಮಿಸಿದ್ದ ಅವರು ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಬಿ.ಪಾಟೀಲ ಅವರಿಂದ ಸನ್ಮಾನ ಸ್ವೀಕರಿಸಿ, ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಈ ಸಂಧರ್ಭದಲ್ಲಿ ಯುವ ಮುಖಂಡರು, TAPCMS ನ ಅಧ್ಯಕ್ಷರಾದ ಅಭಿಷೇಕ ಪಾಟೀಲ, KMF ನ ಮಾಜಿ ಅಧ್ಯಕ್ಷರು, ನಿರ್ದೇಶಕರಾದ ರೇವಣಸಿದ್ಧಪ್ಪಾ ಪಾಟೀಲ, ಲಕ್ಷ್ಮಣರಾವ್ ಬಳ್ಳಾ, ಅಪ್ಸರ ಮಿಯ್ಯಾ , ಉಮೇಶ ಜಂಬಗಿ, ಮಲ್ಲಿಕಾರ್ಜುನ ಮಾಶೆಟ್ಟಿ, ಪ್ರಕಾಶ ಕಾಡಗೊಂಡ , ಸುರೇಶ ಘಾಂಗ್ರೆ, ರಾಹೀಲ್ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

RELATED ARTICLES

Most Popular

error: Content is protected !!
Join WhatsApp Group