ಕಲ್ಲೋಳಿ: ಜೈ ಹನುಮಾನ ಯುವ ಜನ ಸೇವಾ ಸಂಘದಿಂದ ಮುಖ್ಯ ಮಂತ್ರಿಗಳಿಗೆ ಮನವಿ

Must Read

ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ್ ಡಿ.ಜಿ.ಮಹಾತ್ ಅವರು ಗುರುವಾರದಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದಲ್ಲಿ ವಯೋಮಿತಿ ಮೀರುತ್ತಿರುವ ನಿರುದ್ಯೋಗಿಗಳಿಗೆ ಸರಕಾರಿ ನೌಕರಿಯಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಸರಕಾರದಿಂದ ಕೆಲ ವರ್ಷಗಳಿಂದ ಉದ್ಯೋಗ ಕರೆಯುವ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರಸ್ತುತ ಕರೋನಾ ಸಮಯದಲ್ಲಂತೂ ಉದ್ಯೋಗದ ಭರ್ತಿ ಅತೀ ಕಡಿಮೆಯಾಗಿರುತ್ತದೆ. ಪದವಿ, ವೃತ್ತಿಪರ, ಶಿಕ್ಷಣ, ಪೂರೈಸಿರುವಂತಹ ಯುವಕ ಯುವತಿಯರು, ಕೂಲಿ ಕೆಲಸ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ. ಆದರೆ ಈಗಾಗಲೇ ಕೆಲ ವರ್ಷಗಳ ಹಿಂದೆ ಸರಕಾರ ವಯೋಮಿತಿ ಮೀರುತ್ತಿರುವ ನಿರುದ್ಯೋಗಿಗಳಿಗೆ 2-3 ಸಲ ಉದ್ಯೋಗ ಕರೆದು ಮೊದಲ ಪ್ರಾಶಸ್ತ್ರ ನೀಡಿತ್ತು. ಆದರೆ ಸದ್ಯದ ಸರಕಾರಗಳು ಇತ್ತೀಚಿನ ವರ್ಷಗಳಲ್ಲಿ ವಯೋಮಿತಿ ಮೀರುತ್ತಿರುವ ನಿರುದ್ಯೋಗಿಗಳ ಬಗ್ಗೆ ಚರ್ಚೆ ಹಾಗೂ ಉದ್ಯೋಗ ನೀಡುವ ದರ ಬಗ್ಗೆ ಎಲ್ಲೂ ಕಂಡು ಬರುತ್ತಿಲ್ಲಾ.

ಆದ್ದರಿಂದ ಸರಕಾರ ವಯೋಮಿತಿ ಮೀರುತ್ತಿರುವ ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶ ನೀಡಬೇಕೆಂದು ಮನವಿಯಲ್ಲಿ ಆಗ್ರಹಿದ್ದಾರೆ.

ಈ ಸಮಯದಲ್ಲಿ ಸಂಘಟನೆಯ ಅಧ್ಯಕ್ಷ ಪರುಶುರಾಮ ಇಮಡೇರ, ಉಪಾಧ್ಯಕ್ಷ ಮಹಾಂತೇಶ ಕಡಲಗಿ, ಪದಾಧಿಕಾರಿಗಳಾದ ರಾಜಪ್ಪ ಮಾವರಕರ, ಭೀಮಶಿ ಗೋಕಾಂವಿ, ಸಿದ್ದಪ್ಪ ಪೂಜೇರಿ, ಸಿದ್ದಪ್ಪ ಉಮರಾಣಿ, ಭೀಮಶಿ ಕಡಲಗಿ ಮತ್ತಿತರು ಇದ್ದರು.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group