ಮಾಂಜರ ನದಿ ದಾಟಲು ಹೋದ ರೈತ ನದಿಯ ಪಾಲು

Must Read

ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಸತತವಾಗಿ ಎರಡು ದಿವಸ ದಿಂದ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಇರುವ ಹಲವು ಕೆರೆ ಮತ್ತು ನದಿಗಳು ತುಂಬಿ ಹರಿಯುತ್ತದೆ ಇಂತಹ ಸಂದರ್ಭದಲ್ಲಿ ರೈತನೊಬ್ಬ ನದಿ ದಾಟುವಾಗ ನದಿ ಪಾಲಾದ ಘಟನೆ ನಡೆದಿದೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಭಾಲ್ಕಿ ತಾಲೂಕಿನ ಲಖಣಗಾಂವ ಗ್ರಾಮದ ಹತ್ತಿರ ಇರುವ ಮಾಂಜರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ದಾಟಿಕೊಂಡು ಹೋಗುವಾಗ ವ್ಯಕ್ತಿಯೊಬ್ಬರು ನದಿಯಲ್ಲಿ ಹರಿದುಕೊಂಡು ಹೋದ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ಲಖಣಗಾಂವ ಗ್ರಾಮದ ಜ್ಞಾನೇಶ್ವರ ಸುರುಪರಾವ ಚಾಂದಿವಾಲೆ ನೀರಿನಲ್ಲಿ ಹರಿದುಹೋದ ರೈತ ವ್ಯಕ್ತಿ. ಇವರು ಬುಧವಾರ ಮುಂಜಾನೆ ನದಿಯ ಸೇತುವೆ ಮೇಲಿಂದ ನದಿ ದಾಟಿಕೊಂಡು ಹೋಗುವಾಗ ನೀರಿನ ಸೆಳೆತಕ್ಕೆ ಜಾರಿಕೊಂಡು ನದಿಯಲ್ಲಿ ಬಿದ್ದು ಹರಿದು ಹೋಗಿದ್ದಾರೆ.

ನದಿಯ ಸೇತುವೆ ಹತ್ತಿರದ ಅಕ್ಕ ಪಕ್ಕದ ಗ್ರಾಮದವರು ಹುಡುಕಾಟದಲ್ಲಿ ತೊಡಗಿದ್ದರು.ಇಂದು ರೈತ ವ್ಯಕ್ತಿಯ ಸಾವು ಸಂಭವಿಸಿರುವುದಾಗಿ ಸ್ಥಳೀಯ ಪೊಲೀಸ್ ಮೂಲಗಳು ತಿಳಿಸಿವೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group