- Advertisement -
ಬೀದರ – ಬಿಟ್ ಕಾಯಿನ್ ಹಗರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.
ಬೀದರ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಈ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅವರು ಯಾವ ಪಕ್ಷದವರೇ ಇರಲಿ ಅಂಥವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದರು.
- Advertisement -
ಈ ಹಗರಣ ಕುರಿತು ಬಿಜೆಪಿ ರಾಜಕೀಯ ಪ್ರೇರಿತ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ವೈಯಕ್ತಿಕ ದ್ವೇಷ ಇಟ್ಟುಕೊಂಡು ಆರೋಪ ಮಾಡಬಾರದು ಎಂದು ನುಡಿದ ಅವರು, ಪ್ರಕರಣದಲ್ಲಿ ಶಾಮೀಲಾದವರ ವಿರುದ್ಧ ಕಾನೂನ ಪ್ರಕಾರ ಕ್ರಮ ಜರುಗಿಸಲೇಬೇಕು ಎಂದರು.