ಮಾಡಲಗೇರಿ ಕ.ಸಾ.ಪ.ಸದಸ್ಯರಿಂದ ವಿವೇಕಾನಂದಗೌಡ ಪಾಟೀಲರಿಗೆ ಸನ್ಮಾನ

Must Read

ಗದಗ: ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ವಿವೇಕಾನಂದಗೌಡ ಪಾಟೀಲ ಅವರನ್ನು ಗದಗ ಲೇಕ್ ವ್ಯೂ ಹೋಟೆಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಡಲಗೇರಿ ಗ್ರಾಮದ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯರುಗಳಾದ ಹಾಗೂ ಯುವ ಸಾಹಿತಿ ಡಾ.ವ್ಹಿ.ಬಿ. ಸಣ್ಣಸಕ್ಕರಗೌಡರ, ಬಸವರಾಜ ಹಡಪದ, ಬಸವರಾಜ ಪೂಜಾರ, ಯುವ ಧುರೀಣ ಸಿದ್ಧಲಿಂಗಪ್ಪ ನವಲಗುಂದ ಅವರುಗಳು ನೂತನ ಅಧ್ಯಕ್ಷರನ್ನು ಸನ್ಮಾನಿಸಿ, ಸಿಹಿಹಂಚಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಡಾ.ಅರ್ಜುನ ಗೊಳಸಂಗಿ, ಡಾ.ಶಿವಪ್ಪ ಕುರಿ, ಹಿರಿಯ ಶಿಕ್ಷಕರಾದ ಪಿ.ಎಚ್.ಕಡಿವಾಲ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group