ಸ್ವಾತಂತ್ರ್ಯೋತ್ಸವ ಕವನ

Must Read

ಹೇಳೋಣ ನನ್ನ ಭಾರತ ಮಹಾನ್

ಕಟ್ಟೋಣ ಇಲ್ಲೇ ಕಾಡನ್ನು ಕಡಿದು
ದೊಡ್ಡ ದೊಡ್ಡ ನಿವೇಶನಗಳಲ್ಲಿ
ಶಾಪಿಂಗ್ ಮಾಲ್ ಗಳನ್ನ

ಕಿತ್ತೆಸೆಯೋಣ ಗುಡಿಸಲುಗಳನ್ನ
ಗೇಣು ಹೊಟ್ಟೆ ತುಂಬಿಸಲು ಹೆಣಗುವ ಮಾನವ ಗೂಡುಗಳನ್ನ

ನಿಮೂ೯ಲ ಮಾಡುತ್ತ ವನಸಿರಿಯನ್ನ
ನಿಮಿ೯ಸೋಣ ಜಲ್ಲಿ ಕಾಂಕ್ರೀಟ್ ಕಾಡುಗಳನ್ನ

ನೀರಿಲ್ಲವೆ ?
ಚಿಂತೆ ಇಲ್ಲ ತರಿಸೋಣ ಬಿಸಲೆರಿ
ಬಾಟಲ್ ಗಳನ್ನ ವಿದೇಶದಿಂದ !

ನಿಮಿ೯ ಸೋಣ ಒಂದು ಹೊಸ ವಿಶ್ವ ವಿಶ್ವಕಮ೯ ನಿಗೂ ಮಾಡಲಾಗದಂಥಾದ್ದು

ನೀತಿ ನೈತಿಕತೆಯನ್ನು ಗಂಟು ಕಟ್ಟಿ
ಬೀಸಾಡೋಣ ಗಾಂಧಿಯ ಪ್ರತಿಮೆ ಬುಡಕೆ

ಮತ್ತೆ ಹಾಡೋಣ ದೇಶ ಗಾನ
ಸುಜಲಾಂ ಸುಫಲಾಂ
ನನ್ನ ಭಾರತ ಮಹಾನ್
ನನ್ನ ಭಾರತ ಮಹಾನ್

ರಾಧಾ ಶಾಮರಾವ್
ಧಾರವಾಡ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group