ಸಂವಿಧಾನ ಗೌರವಿಸುವುದೇ ದೇಶದ ಗೌರವ – ಕಡಾಡಿ

Must Read

ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ.26 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿಯಲ್ಲಿ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡಿದೆ, ಜಾತಿ, ಮತ, ಪಂಥಗಳ ಭೇದ ತೊರೆದು ಭಾರತೀಯ ಎನ್ನುವ ತತ್ವದಡಿ ದೇಶದಲ್ಲಿ ಸಾಮರಸ್ಯ ಮೂಡಿಸಬೇಕಾಗಿದೆ. ಅದೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ನೀಡುವ ಅತಿದೊಡ್ಡ ಗೌರವವಾಗಿದೆ ಎಂದರು.

ಶ್ರೀ ಮಹಾಲಕ್ಷ್ಮೀ ಪಿ.ಕೆ.ಪಿ.ಎಸ್, ಕಲ್ಲೋಳಿ ಹಾಲು ಉತ್ಪಾದಕರ ಸಹಕಾರಿ ಸಂಘ, ಸೇವಾ ಸಂಸ್ಥೆಯ ಆಡಳಿತ ಕಛೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು.

ಸಹಕಾರಿ ನಿರ್ದೇಶಕರಾದ ಶ್ರೀಶೈಲ ತುಪ್ಪದ, ಬಾಳಪ್ಪ ಸಂಗಟಿ, ಶಿವಗೊಂಡ ವ್ಯಾಪಾರಿ, ಸಹದೇವ ಹೆಬ್ಬಾಳ, ಸಿದ್ದಪ್ಪ ಹೆಬ್ಬಾಳ, ಪ್ರಭು ಕಡಾಡಿ, ಹಣಮಂತ ಸಂಗಟಿ, ರಾಮಲಿಂಗ ಬಿ.ಪಾಟೀಲ, ಮಹಾದೇವ ಮಧಬಾಂವಿ, ಕಾಡೇಶ ಗೋರೋಶಿ, ತುಕಾರಾಮ ಪಾಲ್ಕಿ, ಗುರುನಾಥ ಮಧಬಾಂವಿ, ಅಜೀತ ಚಿಕ್ಕೋಡಿ, ಶಂಕರ ಖಾನಗೌಡ್ರ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ ಸೇರಿದಂತೆ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರೂ ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group