ಪ್ರೇಮ ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Must Read

ಕಲೆ -ಸಾಹಿತ್ಯ -ಸಾಂಸ್ಕೃತಿಕ ವೇದಿಕೆ ‘ಸಮ್ಮಿಲನ’ ವತಿಯಿಂದ 252ನೇ ಮಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಫೆ. 13, ಭಾನುವಾರ ದಂದು ನಗರದ ಶೇಷಾದ್ರಿಪುರ ಅಂಚೆ ಕಚೇರಿ ಪಕ್ಕದ ಕೆನ್ ಕಲಾ ಶಾಲೆಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರೇಮ ಕವಿಗೋಷ್ಠಿ- ಪ್ರೇಮ ಗೀತಗಾಯನ ಹಾಗು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಹಿರಿಯ ಪತ್ರಕರ್ತ ರು.ಬಸಪ್ಪ ರವರು ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ ‘ಶಾರದಾ ಸುಪುತ್ರ ಪ್ರಶಸ್ತಿ’ ಹಾಗು ಕಲಾವಿದ ಕೆ.ಜಿ.ಸಂಪತ್ಕುಮಾರ್ ರವರಿಗೆ ‘ಗಾಯಕ ಎಸ್.ಯಲ್ಲಪ್ಪ ಸ್ಮಾರಕ ಪ್ರಶಸ್ತಿ’ ನೀಡಿ ಗೌರವಿಸುವರು. ಬೆಂ.ನ.ಕಸಾಪ ನಿಕಟಪೂರ್ವ ಗೌ.ಕಾರ್ಯದರ್ಶಿ ಬಿ.ಶೃಂಗೇಶ್ವರ್ ಅಧ್ಯಕ್ಷತೆ ವಹಿಸುವರು ಹಾಗು ಕವಿಗೋಷ್ಠಿ ಹಾಗೂ ಗಾಯನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಆಯೋಜಕರಾದ ಕನ್ನಡ ಪುಸ್ತಕ ಪರಿಚಾರಕ ಕುವರ ಯಲ್ಲಪ್ಪ ತಿಳಿಸಿದ್ದಾರೆ. ವಿವರಗಳಿಗೆ : 9972652804

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group