ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲ ವಿತರಣೆ

Must Read

ಮೂಡಲಗಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಮಹಾಸಭಾದ 14ನೇ ವರ್ಷಾಚರಣೆಯ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯಿಂದ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ರೋಗಿಗಳಿಗೆ ಹಣ್ಣು-ಹಂಪಲ ವಿತರಿಸಿ ಸಂಸ್ಥಾಪನಾ ದಿನ ಆಚರಿಸಿದರು.

ಈ ಸಮಯದಲ್ಲಿ ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಸವರಾಜ ಪಾಟೀಲ ಮತ್ತು ಸಮಿತಿ ಸದಸ್ಯರಾದ ಅಜ್ಜಪ್ಪ ಬಳಿಗಾರ, ಸಂಗಮೇಶ ಕೌಜಲಗಿ, ಸದಾಶಿವ ನಿಡಗುಂದಿ, ಮಲ್ಲು ಗೋಡಿಗೌಡರ, ಸುಭಾಸ ಕಡಾಡಿ ಮತ್ತು ಆರೋಗ್ಯ ಕೇಂದ್ರ ಹಿರಿಯ ವೈದ್ಯಾಧಿಕಾರಿ ಡಾ: ಭಾರತಿ ಕೋಣಿ, ಚೇತನ ನಿಶಾನಿಮಠ, ಇರಶಾದ ಪಿರಜಾದೆ ಇದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group