ಸಿಂದಗಿ: ಕಳೆದ ಜ.26 ರಂದು ರಾಯಚೂರು ಜಿಲ್ಲೆ ನ್ಯಾಯಾಲಯದಲ್ಲಿ ನಡೆದ ಅಸಾಂವಿಧಾನಿಕ ಕೃತ್ಯದ ಕುರಿತು ಹಾಗೂ ಆ ಕೃತ್ಯವನ್ನು ಎಸಗಿದ ಸಮಾನತೆ ವಿರೋಧಿ ವಿಕೃತ ಮನಸ್ಸಿನ ಮಲ್ಲಿಕಾರ್ಜುನ ಗೌಡರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಹಾಗೂ ಅವರನ್ನು ಗಡಿಪಾರು ಮಾಡಬೇಕು ಹಾಗೂ ಇನ್ನು ಹತ್ತು ಹಲವಾರು ಬೇಡಿಕೆಗಳಿಗೆ ಒತ್ತಾಯಿಸಿ ಫೇ.19 ರಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಹೈಕೋರ್ಟ ಚಲೋ ಎಂಬ ಬೃಹತ್ ಪ್ರಮಾಣದ ಕಾರ್ಯಕ್ರಮಕ್ಕೆ ನಾಡಿನ ಯುವ ಹೋರಾಟಗಾರರು ಸಮಾನ ಮನಸ್ಕರು ಪ್ರಗತಿಪರ ಚಿಂತಕರು ಸಂವಿಧಾನದ ಹಿತೈಷಿಗಳು ಹಾಗೂ ಬುದ್ದಿಜೀವಿಗಳು ಪಾಲ್ಗೊಳ್ಳಬೇಕು ಅದಲ್ಲದೆ ವಿಜಯಪುರ ಜಿಲ್ಲೆ ಹಾಗೂ ಸಿಂದಗಿ ತಾಲೂಕಿನಿಂದ ಲಕ್ಷೋಪಲಕ್ಷ ಸಮಾನ ಮನಸುಗಳು ಈ ಕಾರ್ಯಕ್ರಮವನ್ನು ಯಶಸ್ವಿ ಮಾಡಿ ಕೊಡಬೇಕೆಂದು ಹರ್ಷವರ್ಧನ ಪೂಜಾರಿಯವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.
Previous article
Next article
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...

