ಹರ್ಷ ಹತ್ಯೆ ಖಂಡಿಸಿ ಬೀದರ್ ನಲ್ಲಿ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳ ಪ್ರತಿಭಟನೆ

Must Read

ಬೀದರ: ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಬೀದರ್ ನಲ್ಲಿ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳ ಜೊತೆ ಸೇರಿ ಬೀದರ್ ನಲ್ಲಿ ಬಾರಿ ಪ್ರಮಾಣದಲ್ಲಿ ಪ್ರತಿಭಟನೆ ನಡೆಯಿತು.

ಗಣೇಶ ಮೈದಾನದ ದೇವಾಲಯದ ಆವರಣದಲ್ಲಿ ಸೇರಿದ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಗಣೇಶ ಮೈದಾನದಿಂದ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಿ, ಕಾರ್ಯಕರ್ತನ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

’ಹಿಜಾಬ್‌ ಪ್ರಕರಣದ ಬೆನ್ನಲ್ಲೇ, ಭಜರಂಗದಳದ ಸಕ್ರಿಯ ಕಾರ್ಯಕರ್ತನನ್ನು ಭಾನುವಾರ ರಾತ್ರಿ ಹತ್ಯೆ ಮಾಡಿರುವುದು ಕ್ರೂರ ದುಷ್ಕೃತ್ಯವಾಗಿದ್ದು, ಸಮಾಜದಲ್ಲಿ ಆತಂಕ ಮೂಡಿಸಿದೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಭಿನ್ನತೆಯ ಭಾವ ಮೂಡಿಸಿ ರಾಷ್ಟ್ರೀಯತೆಗೆ ಧಕ್ಕೆ ಉಂಟು ಮಾಡಿ ಜನಮಾನಸದಲ್ಲಿ ಅಶಾಂತಿ ಸೃಷ್ಟಿಸುವ ಹೇಯ ಕೃತ್ಯ ಇದು‘ ಎಂದು ಪ್ರತಿಭಟನಕಾರರು ದೂರಿದರು.

ಹರ್ಷ ಕುಟುಂಬಕ್ಕೆ ಸರ್ಕಾರ ತಕ್ಷಣವೇ ಇಪ್ಪತ್ತು ಐದು ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಪ್ರತಿಭಟನೆ ಕಾರರು ಆಗ್ರಹಿಸಿದರು.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಜಿಲ್ಲಾ ವರಿಷ್ಠ ಅಧಿಕಾರಿ ಕಿಶೋರ್ ಬಾಬು ಹಾಗು ಡಿವೈಸ್ ಪಿ ಸತೀಶ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group