ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ.ರಾಮನ್ ಕೊಡುಗೆ ಅಪಾರ- ಶಿಕ್ಷಕ ಕಬ್ಬೂರ ಅಭಿಮತ

Must Read

ಸವದತ್ತಿ: ಭೌತಶಾಸ್ತ್ರದಲ್ಲಿ ಬೆಳಕಿನ ವಿಷಯದ ಮೇಲೆ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಸಿ.ವಿ.ರಾಮನ್ ರವರದ್ದಾಗಿದ್ದು, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಜ್ಞಾನಿಯಾಗಿದ್ದಾರೆ. ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಹಂಚಿಕೊಂಡರು.

ಭಾರತದ ಹೆಮ್ಮೆಯ ವಿಜ್ಞಾನಿಯಾದ ಸಿ.ವಿ.ರಾಮನ್ ರು ಅವರ “ರಾಮನ್ ಎಫೆಕ್ಟ್” ಎಂಬ ಅಧ್ಯಯನದ ವಿವರಗಳನ್ನು 1928 ಫೆಬ್ರವರಿ 28 ರಂದು ಜಗತ್ತಿಗೆ ತಿಳಿಸಿದರು. ಅದರ ಸವಿನೆನಪಿಗಾಗಿ “ರಾಷ್ಟ್ರೀಯ ವಿಜ್ಞಾನ ದಿನ” ಪ್ರತಿ ವರ್ಷ ಆಚರಿಸಲಾಗುತ್ತದೆ ಎಂದು ಪಟ್ಟಣದ ಸರಕಾರಿ ಪ್ರಾಥಮಿಕ ಶಾಲೆ ನಂ-6 ರಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಸಂದರ್ಭದಲ್ಲಿ ಅವರು ಮಾತನಾಡಿದರು.

ನಂತರ ಮಕ್ಕಳಿಗೆ ಸರಳ ಪ್ರಯೋಗಗಳನ್ನು ಮಾಡಿ ತೋರಿಸಲಾಯಿತು. ಮಕ್ಕಳಿಗಾಗಿ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಎಮ್.ಆರ್.ಫಂಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಾಲಕರು ಉಪಸ್ಥಿತರಿದ್ದರು.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group