ಬೀದರ: ಭ್ರಷ್ಟ ಅಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

Must Read

ಬೀದರ – ಜಿಲ್ಲಾ ಪಂಚಾಯತ ಬೀದರ್ ನ ಗ್ರಾಮೀಣ ಕುಡಿಯುವ ನೀರು ಯೋಜನೆ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು ಒಬ್ಬ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.

ಜಿಲ್ಲಾ ಪಂಚಾಯತಿಯ ಅಸಿಸ್ಟೆಂಟ್ ಇಂಜಿನೀಯರ್ ನಾಗನಾಥ್ ಬಿರಾದಾರ ಎಂಬುವವರು ಜಲ ಜೀವನ್ ಮಿಷನ್ ಅಡಿಯಲ್ಲಿ ಫೈಲ್ ಮೂವ್ ಮೆಂಟ್ ಮಾಡಲು ರೂ. 30 ಸಾವಿರ ಹಣ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಗುತ್ತಿಗೆದಾರ ಮಚ್ಚೆಂದ್ರರಡ್ಡಿ ಅವರಿಂದ ಲಂಚ ಪಡೆಯುವಾಗ ಜಿ ಪಂ ಎಇಇ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಎಸ್ಪಿ ಅಮರನಾಥ್ ರಡ್ಡಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಹಣಮಂತರಾಯ, ಪಿಐ ಶರಣಬಸಪ್ಪಾ ಕೋಡಲಾ, ವೆಂಕೆಟೇಶ್ ಎಡಹಳ್ಳಿ, ಹಾಗೂ ಸಿಬ್ಬಂದಿಗಳಾದ ಶ್ರೀಕಾಂತ್,ಕುಶಾಲ್, ಅನಿಲ್,ಕಿಶೋರ್ ಸೇರಿದಂತೆ ಹಲವು‌ ಸಿಬ್ಬಂದಿಗಳು ದಾಳಿಯಲ್ಲಿ ಭಾಗಿಯಾಗಿದ್ದರು.

ಸದರಿ ಅಧಿಕಾರಿಯ ಮೇಲೆ ಅಕ್ರಮ ಹಣ ಗಳಿಕೆ ದೂರುಗಳ ಹಿನ್ನಲೆ ಈ ದಾಳಿ ನಡೆದಿದ್ದು ಪ್ರಕರಣ ದಾಖಲಾಗಿದೆ.

ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group