Homeಸುದ್ದಿಗಳುಐತಿಹಾಸಿಕ ಶಿವನ ಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿಗಳು

ಐತಿಹಾಸಿಕ ಶಿವನ ಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿಗಳು

ಬೀದರ್ – ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪೂರ್ ಗ್ರಾಮದಲ್ಲಿ ಚಾಳಕಾದೇವಿ ಬೆಟ್ಟದಲ್ಲಿರುವ ಶಿವನ ಮೂರ್ತಿ ಜೊತೆಗೆ ಗಣೇಶನ ಮೂರ್ತಿಯನ್ನೂ ಕಿಡಿಗೇಡಿಗಳು ವಿರೂಪಗೊಳಿಸಿದ ಘಟನೆ ತಡರಾತ್ರಿ ನಡೆದಿದೆ.

ಮಹಾನ್ ಸಿದ್ದಿ ಪುರುಷ ಶ್ರೀ ಸಿದ್ದಾರೂಢರ ಜನ್ಮ ಸ್ಥಳದಲ್ಲಿ ಈ ಘಟನೆ ನಡೆದಿದ್ದು ಶಿವನ ಹಾಗೂ ಗಣೇಶನ ಮೂರ್ತಿಗಳನ್ನು ವಿರೂಪಗೊಳಿಸಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರ್ತಿಗಳನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಈ ಕೂಡಲೆ ಬಂಧಿಸಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದು ಖಟಕ್ ಚಿಂಚೋಳಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದರು .ಈ ಕುರಿತು ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

error: Content is protected !!
Join WhatsApp Group