Homeಸುದ್ದಿಗಳುಮೀಸಲಾತಿ ವಿಳಂಬ ಖಂಡಿಸಿ ಧರಣಿ ಸತ್ಯಾಗ್ರಹ

ಮೀಸಲಾತಿ ವಿಳಂಬ ಖಂಡಿಸಿ ಧರಣಿ ಸತ್ಯಾಗ್ರಹ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ತಾಲೂಕಾ ಘಟಕ ಮೂಡಲಗಿ ನೇತೃತ್ವದಲ್ಲಿ ಮೇ 7 ರಂದು ಶನಿವಾರ ಮುಂಜಾನೆ 9 ಘಂಟೆಗೆ ಸಮೀಪದ ಗುರ್ಲಾಪುರ ನಿರೀಕ್ಷಣಾ ಮಂದಿರ (IB) ಹತ್ತಿರ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರದಲ್ಲಿ ಅಸಡ್ಡೆ ಹಾಗೂ ವಿಳಂಬವನ್ನು ಖಂಡಿಸಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಮೂಡಲಗಿ ತಾಲೂಕಾ ಪಂಚಮಸಾಲಿ ಸಮಾಜದ ಗುರು ಹಿರಿಯರು ಯುವಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ಧೋರಣೆಯನ್ನು ಖಂಡಿಸಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟೋಣ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂಬುದಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ (ರಿ) ತಾಲ್ಲೂಕು ಘಟಕ ಮೂಡಲಗಿಯ ಅಧ್ಯಕ್ಷ ಬಸವರಾಜ ಪಾಟೀಲ ಕೋರಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group