ಬ್ಯಾಡಗಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

Must Read

ಬ್ಯಾಡಗಿ – ಇಂದು ತಹಸೀಲ್ದಾರ್ ಕಛೇರಿಯಲ್ಲಿ ನಡೆದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ವಿರೂಪಾಕ್ಷಪ್ಪ ರು ಬಳ್ಳಾರಿ ಭಾಗಿಯಾಗಿದ್ದರು.

ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯತ್ರಯರಲ್ಲಿ ಶ್ರೀ ಶಂಕರಾಚಾರ್ಯರು ಮೊದಲಿಗರು. ಅದ್ವೈತ ತತ್ವವನ್ನು ಪ್ರತಿಪಾದಿಸಿ ಹಿಂದೂ ಧರ್ಮವನ್ನು ಪುನಃರುತ್ಥಾನಗೊಳಿಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಕಲಾವತಿ ಬಡಿಗೇರ ಉಪಾಧ್ಯಕ್ಷರಾದ ಶ್ರೀಮತಿ ಗಾಯತ್ರಮ್ಮ ರಾಯ್ಕರ, ಉಮೇಶಣ್ಣ ರಟ್ಟೀಹಳ್ಳಿ, ಶ್ರೀನಿವಾಸ ಶಿವಪೂಜೆ, ಶ್ರೀನಿವಾಸ ಕುಲಕರ್ಣಿ, ಶ್ರೀಮತಿ ಸಂಧ್ಯಾ ದೇಶಪಾಂಡೆ, ಹನಮಗೌಡ ಪಾಟೀಲ, ವಿನಾಯಕ ಹುದ್ದಾರ ತಹಶೀಲ್ದಾರರಾದ ರವಿಕುಮಾರ ಕೊರವರ, ಪುರಸಭೆ ಮುಖ್ಯಾಧಿಕಾರಿಗಳಾದ ಯೇಸು ಬೆಂಗಳೂರು, ಗ್ರೇಡ-2 ತಹಶೀಲ್ದಾರರಾದ ದ್ಯಾವಣ್ಣನವರ, ಶಿರಸ್ತೆದಾರರಾದ ಹೆಚ್ ಹೆಚ್ ಹತ್ತಿಮತ್ತೂರು ರವರು ಜೊತೆಗಿದ್ದರು.

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group