ಬೀದರ – ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿ ನಡೆದಿದೆ.
35 ವರ್ಷದ ಆಲೋಕ ಜಾಧವ್ ಕೊಲೆಯಾದ ವ್ಯಕ್ತಿಯಾಗಿದ್ದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹೈದ್ರಾಬಾದ್ ನಲ್ಲಿ ವಾಸವಾಗಿದ್ದ ಚಂಡಕಾಪುರ ಗ್ರಾಮದ ನಿವಾಸಿಯಾಗಿದ್ದ ಆಲೋಕ ಜಾಧವ ಎಂಬ ವ್ಯಕ್ತಿಯನ್ನು ಅದೇ ಗ್ರಾಮದ ಆರೋಪಿ ಅಂಬಾದಾಸ್ ಮತ್ತು ಗುಂಪು ಕೊಲೆ ಮಾಡಿದೆಎನ್ನಲಾಗಿದೆ.
ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಾರಿಯಾದ ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ