ಜುಲೈ 3 ರಂದು ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ

Must Read

ಬೆಂಗಳೂರು – ನಗರದ ಕೆ. ಆರ್. ಪುರಂನ ಮುನಿಯಪ್ಪ ಗಾರ್ಡನ್ ಬಡಾವಣೆ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 3 ಭಾನುವಾರ ಮಧ್ಯಾಹ್ನ 2.30ಕ್ಕೆ ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ.

ವಿದ್ವಾನ್ ಆಯನೂರು ಮಧುಸೂದನಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಪ್ರವಚನ ನಡೆಸಿಕೊಡುವರು.

ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ , ಸಮಾಜ ಸೇವಕರಾದ ಲಕ್ಷ್ಮಿ ಹರೀಶ್ , ಕೆ.ವಿ.ಭಾಸ್ಕರ್ ನಾಯ್ಡು ,ರಂಗವಿಠಲ ಹರಿದಾಸ ಸಂಗೀತ ಶಾಲೆಯ ಸಂಸ್ಥಾಪಕ ಖ್ಯಾತ ಗಾಯಕ ಬೈರಾಪುರ ಸತ್ಯನಾರಾಯಣ ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಕೆ. ಆರ್. ಪುರಂ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದ ವ್ಯವಸ್ಥಾಪಕ ವಿದ್ವಾನ್ ಮುರಳಿಧರಾಚಾರ್ಯರು ವಹಿಸಿಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕ ರಾದ ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ಸಂಸ್ಥಾಪಕ ಸಂಜೀವ ಕೃಷ್ಣಜಿ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group