ಕಟ್ಟಡ ಕಾರ್ಮಿಕರಿಗೆ ಕಾನೂನು ಅರಿವು-ನೆರವು  ಕಾರ್ಯಕ್ರಮ

Must Read

ಸಿಂದಗಿ: ಕಾರ್ಮಿಕರು ಎಂದರೆ ವಿವಿಧ ರೀತಿಯ ಕೃಷಿ ಕಾರ್ಮಿಕರು, ಗೃಹ ಕಾರ್ಮಿಕರು, ಕಟ್ಟಡ ಕಾರ್ಮಿಕರು ಎಂದು ಕರೆಯುತ್ತೇವೆ. ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿ ಮಾಡಿಸಿಕೊಂಡರೆ ಮಾತ್ರ ಸರಕಾರಿ ಸೌಲಭ್ಯಗಳು ಸಿಗುತ್ತವೆ ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ವೈದ್ಯಕೀಯ ಸೌಲಭ್ಯ, ಮಕ್ಕಳ ಶಿಷ್ಯ ವೇತನ, ಮಕ್ಕಳ ಮದುವೆ ಸಹಾಯ ಧನ, ಅಂತ್ಯಕ್ರಿಯ ವೆಚ್ಚ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದು ಇತ್ಯಾದಿ ಎಂದು ಜೆ.ಎಮ್.ಎಫ್.ಸಿ ನ್ಯಾಯವಾದಿ ಬಿ.ಎಸ್.ಪಾಟೀಲ ಹೇಳಿದರು.

ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಇವರ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಹಮ್ಮಿಕೊಂಡ ಕಾನೂನು ಅರಿವು-ನೆರವು  ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ  ವಹಿಸಿದ ಸಂಗಮ ಸಂಸ್ಥೆಯ ನಿರ್ದೇಶಕ ಫಾದರ ಆಲ್ವಿನ್ ಡಿಸೋಜ ಮಾತನಾಡಿ, ಮನುಷ್ಯ ಒಂದು ವ್ಯವಸ್ಥಿತವಾಗಿರಬೇಕು ಅಂದರೆ ಅದಕ್ಕೆ ಸಂವಿಧಾನ ಕಾರಣ  ಪ್ರತಿ ಮನುಷ್ಯನ ತಳಪಾಯ ಅಂದರೆ ಅದು ಸಂವಿಧಾನ. ಸಂವಿಧಾನ ನಮಗೆ ರಕ್ಷಣೆ ಮಾಡುವುದು. ಸರಕಾರ ನಮಗೆ ನೀಡುವ ಸೌಲಭ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕೆಲಸ ಸಂಗಮ ಸಂಸ್ಥೆಯು ಮಾಡುತ್ತದೆ. ಕಾನೂನಿನ ಅಡಿಪಾಯ ನಮ್ಮ ಸಂವಿಧಾನ ಸಂವಿಧಾನದಲ್ಲಿ ಅಡಗಿರುವಂತಹ ವ್ಯವಸ್ಥೆಗಳು ಜನ ಸಾಮಾನ್ಯರಾಗಲು ನಮಗೆ ರಕ್ಷಣೆಯನ್ನು ಮಾಡುತ್ತದೆ. ಸಂವಿಧಾನ ಎಲ್ಲರಿಗೂ ಬೇಕು ಶಿಕ್ಷಣವಂತರಿಗೂ ಬೇಕು ಶಿಕ್ಷಣ ಇಲ್ಲದವರಿಗೂ ಬೇಕು. ಈ ಸಂವಿಧಾನ ಕುರಿತು ಪ್ರತಿಯೊಬ್ಬರಿಗೂ ನಂಬಿಕೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಸಂಗಮ ಸಂಸ್ಥೆಯ ಸಹನಿರ್ದೇಶಕಿ ಸಿಸ್ಟರ್ ಸಿಂತಿಯಾ ಡಿಮೆಲ್ಲೊ ಪ್ರಾಸ್ತಾವಿಕವಾಗಿ ಮಾತನಾಡಿದರು.  ಡಾ|| ಎ ಪಿ ಜೆ ಅಬ್ದುಲ್ ಕಲಾಂ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಚೇತನಕುಮಾರ ಹೊಟಗಾರ ಹಾಜರಿದ್ದರು. ವಿಜಯ ವಿ ಬಂಟನೂರ ನಿರೂಪಿಸಿದರು. ರಾಜೀವ ಕುರಿಮನಿ ಸ್ವಾಗತಿಸಿದರು.  ಶ್ರೀಧರ ಕಡಕೋಳ ಭಾರತದ ಸಂವಿಧಾನದ ಪ್ರಾಸ್ತಾವನೆ ಓದಿದರು. ಮಲಕಪ್ಪ ಹಲಗಿ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group